Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ

Facebook
Twitter
Telegram
WhatsApp

 

ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆದ ಭಬಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು 58,389 ಮತಗಳ ಬಹುಮತದೊಂದಿಗೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರಿವಾಲ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಅವರು ತಮ್ಮ ತವರು ಕ್ಷೇತ್ರವಾದ ಭವಾನಿಪುರವನ್ನು ತೊರೆದು ನಂದಿಗ್ರಾಮ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಿಂದ ಸೋತಿದ್ದರು.

ಆದರೂ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಆರು ತಿಂಗಳ ಒಳಗಾಗಿ ಶಾಸಕರಾಗಿ ಆಯ್ಕೆಯಾಗಬೇಕಾದ ಹಿನ್ನೆಲೆಯಲ್ಲಿ ಭವಾನಿಪುರದಿಂದ ಜಯಗಳಿಸಿದ್ದ ಟಿಎಂಸಿ ಶಾಸಕ ಶೋಭಾನ್ ದೇವ್ ಚಟ್ಟೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಮತಾ ಬ್ಯಾನರ್ಜಿಯವರಿಗಾಗಿ ಅನುವು ಮಾಡಿಕೊಟ್ಟಿದ್ದರು. ಇದೀಗ ಭವಾನಿಪುರದಿಂದ ಆಯ್ಕೆಯಾಗಿ‌ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

error: Content is protected !!