Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೀವ್-ಇನ್ ಸಂಗಾತಿಯನ್ನು 35 ತುಂಡುಗಳಾಗಿ ಕತ್ತರಿಸಿ ಎಸೆದ ಕ್ರೂರಿ ಪ್ರೇಮಿ..!

Facebook
Twitter
Telegram
WhatsApp

ದೆಹಲಿ: ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನೇ ಪ್ರೇಮಿಯೊಬ್ಬ ತುಂಡು ತುಂಡಾಗಿ ಕತ್ತರಿಸಿ ಅರಣ್ಯಕ್ಕೆ ಬಿಸಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅಫ್ತಾಬ್ ಅಮಿನ್ ಎಂಬಾತ ಇಂತ ಹೀನ ಕೃತ್ಯ ಮಾಡಿದ ವ್ಯಕ್ತಿಯಾಗಿದ್ದಾನೆ.

ಶ್ರದ್ಧಾ ಪ್ರಾಣ ಕಳೆದುಕೊಂಡ ಯುವತಿ. ಇಬ್ಬರು ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಪರಿಚಯವಾಗಿದೆ. ಪರಿಚಯ ಪ್ರೀತಿಗೆ ತಿರುಗಿದೆ. ಆದರೆ ಶ್ರದ್ಧಾ ಮನೆಯವರು ಇಬ್ಬರ ಮದುವೆಗೆ ಒಪ್ಪಿಗೆ ನೀಡಿಲ್ಲ. ಬಳಿಕ ಇಬ್ಬರು ದೆಹಲಿಗೆ ಬಂದು, ಅಪಾರ್ಟ್ಮೆಂಟ್ ಒಂದರಲ್ಲಿ ವಾಸ ಮಾಡುತ್ತಿದ್ದರು. ಇಬ್ಬರ ನಡುವೆ ಆಗಾಗ ಜಗಳಗಳು ನಡೆಯುತ್ತಲೆ ಇತ್ತಂತೆ.

ಇತ್ತೀಚೆಗೆ ಜಗಳ ಅತಿರೇಕಕ್ಕೆ ದಾಟಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಅಫ್ತಾಬ್, ಕೋಪದಲ್ಲಿ ಶ್ರದ್ಧಾಳ ಕತ್ತು ಹಿಸುಕಿ ಸಾಯಿಸಿದ್ದಾನೆ. ಬಳಿಕ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ. ಅದು 35 ತುಂಡುಗಳಾಗಿ ಕತ್ತರಿಸಿದ್ದಾನೆ. ಆ ತುಂಡುಗಳನ್ನು ಇಡುವುದಕ್ಕೆ ಫ್ರಿಜರ್ ಒಂದನ್ನು ಖರೀದಿಸಿದ್ದಾನೆ. ಬಳಿಕ ಆ ದೇಹದ ಒಂದೊಂದೆ ತುಂಡುಗಳನ್ನು ಮೆಹ್ರೌಲಿ ಅರಣ್ಯಕ್ಕೆ ಎಸೆದಿದ್ದಾನೆ. ಬೆಳಗ್ಗಿನ ಜಾವ ಎರಡು ಗಂಟೆಗೆ ಎದ್ದು ಹೋಗಿ, ಮಹಿಳೆಯ ದೇಹದ ತುಂಡುಗಳನ್ನು ಪ್ರತಿ ದಿನವೂ ಎಸೆದು ಬಂದಿದ್ದಾನೆ.

ಇತ್ತೀಚೆಗೆ ಶ್ರದ್ಧಾ ಪೋಷಕರ ಕರೆಗೆ ಸಿಕ್ಕಿರಲಿಲ್ಲ. ಹೀಗಾಗಿ ಆತಂಕಗೊಂಡು ಅವರ ಪೋಷಕರು ಆಕೆ ವಾಸವಿದ್ದ ಅಪಾರ್ಟ್ಮೆಂಟ್ ಗೆ ಬಂದು ನೋಡಿದಾಗ ಇಲ್ಲದೆ ಇರುವುದು ಗೊತ್ತಾಗಿದೆ. ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಅಫ್ತಾಬ್ ನನ್ನು ಅರೆಸ್ಟ್ ಮಾಡಿ, ವಿಚಾರಣೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!