Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಲೇನಹಳ್ಳಿ ಬಳು ರೈಲಿಗೆ ಸಿಲುಕಿ ವ್ಯಕ್ತಿ ಸಾವು: ವಾರಸುದಾರರ  ಪತ್ತೆಗೆ ಮನವಿ

---Advertisement---

ಚಿತ್ರದುರ್ಗ. ಡಿ.17: ಜಿಲ್ಲೆಯ ಚಿತ್ರದುರ್ಗ ಮತ್ತು ಬಾಲೇನಹಳ್ಳಿ ರೈಲು ನಿಲ್ದಾಣಗಳ ಮಧ್ಯೆ ರೈಲ್ವೆ ಕಿಮೀ ನಂ 35/100-200ರ ರೈಲ್ವೆ ಹಳಿಗಳಲ್ಲಿ ಯಾವುದೋ ಚಲಿಸುವ ರೈಲುಗಾಡಿಗೆ ಸಿಲುಕಿ ಸುಮಾರು 25 ರಿಂದ 30 ವರ್ಷದ ಪುರುಷ ವ್ಯಕ್ತಿ ಮೃತಪಟ್ಟಿದ್ದು, ಈ ಕುರಿತು ಡಿ.16ರಂದು ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನಾಮಧೇಯ ಮೃತ ವ್ಯಕ್ತಿಯು 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ ಸು.3 ಇಂಚು ಬಿಳಿ ಮಿಶ್ರಿತ ಕಪ್ಪು ಕೂದಲು ಇವೆ. ಮೃತನು ತುಂಬು ತೋಳಿನ ಲೈಟ್ ಗ್ರೀನ್ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್, ಕಪ್ಪು ಬಣ್ಣದ ಚಡ್ಡಿ, ಕಂದು ಬಣ್ಣದ ಬೆಲ್ಟ್ ಧರಿಸಿರುತ್ತಾರೆ.

 

ಈ ಮೇಲ್ಕಂಡ ವ್ಯಕ್ತಿಯ ಕುರಿತು ಮಾಹಿತಿ ತಿಳಿದು ಬಂದಲ್ಲಿ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08192-259643, 9480802123 ಅಥವಾ ಇ-ಮೇಲ್ davangererly@ksp.gov.in  ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ. 080-22871291 ಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...