ಮಂಡ್ಯ ಸಂಸದೆ ಆಪ್ತ ಬಿಜೆಪಿ ಸೇರ್ಪಡೆ ಘೋಷಣೆ.. ಮುಂದೆ ಸುಮಲತಾ ಕೂಡ ಹೋಗ್ತಾರಾ..?

suddionenews
1 Min Read

ಮಂಡ್ಯ: ಸಂಸದೆ ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಮಂಡ್ಯದ ಜನತೆಯ ವಿಶ್ವಾಸ ಗಳಿಸಿದ್ದಾರೆ. ಅಂದಿನಿಂದಲೂ ಸುಮಲತಾ ಬಿಜೆಪಿಗೆ ಬಂದರೆ ಸ್ವಾಗತ ಎಂದೇ ಬಿಜೆಪಿ ನಾಯಕರು ಹೇಳುತ್ತಾ ಬಂದಿದ್ದಾರೆ. ಆ ಬಗ್ಗೆ ಸುಮಲತಾ ಸ್ಪಷ್ಟನೆ ನೀಡಿದ್ದು, ನಾನು ಯಾವ ಪಕ್ಷಕ್ಕೂ ಹೋಗಲ್ಲ ಎಂದಿದ್ದಾರೆ. ಈ ಬೆನ್ನಲ್ಲೆ ಹೊಸ ಬೆಳವಣಿಗೆಯೊಂದು ನಡೆದಿದೆ.

ಸುಮಲತಾ ಅವರ ಆಪ್ತ, ಇಂಡುವಾಳು ಸಚ್ಚಿದಾನಂದ ಇದೀಗ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಹಿತೈಶಿಗಳು, ಬೆಂಬಲಿಗರ ಸಭೆ ನಡೆಸಿ ಈ ತೀರ್ಮಾನವನ್ನು ತೆಗೆದುಕೊಂಡಿದ್ದು, ಎಲ್ಲರ ಮುಂದೆ ಘೋಷಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಸಚ್ಚಿದಾನಂದ ಅವರು, ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರನ್ನು ಬೆಂಬಲಿಸಿದ್ದಕ್ಕಾಗಿ ಕಾಂಗ್ರೆಸ್ ನನ್ನನ್ನು ಉಚ್ಛಾಟನೆ ಮಾಡಿತ್ತು. ನನ್ನನ್ನು ಮಾತ್ರವಲ್ಲ ಸುಮಲತಾ ಅವರನ್ನು ಬೆಂಬಲಿಸಿದ್ದ ಎಲ್ಲರನ್ನು ಉಚ್ಚಾಟನೆ ಮಾಡಿತ್ತು. ಆದರೆ ಬಳಿಕ ನನ್ನೊಬ್ಬನನ್ನು ಬಿಟ್ಟು ಉಳಿದವರೆಲ್ಲರನ್ನು ಕರೆದುಕೊಳ್ಳಲಾಗಿದೆ. ಕಳೆದ ಎರಡು ವರ್ಷದಿಂದ ನಾನು ಕೂಡ ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿಲ್ಲ. ಆದ್ರೆ ಈಗ ನರೇಂದ್ರ ಮೋದಿಯವರ ಕಾರ್ಯ ಮೆಚ್ಚಿ, ಬಿಜೆಪಿ ಸೇರುತ್ತಿದ್ದೇನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *