Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ – ಜೆಡಿಎಸ್ ತೆಕ್ಕೆಗೆ ಮಂಡ್ಯ ನಗರಸಭೆ : ವಾಮಮಾರ್ಗದಲ್ಲಿ ಅಧಿಕಾರ ಹಿಡಿದರು ಎಂದು ಸಿಡಿದೆದ್ದ ಕಾಂಗ್ರೆಸ್ ನಾಯಕ..!

Facebook
Twitter
Telegram
WhatsApp

ಮಂಡ್ಯ: ಇಂದು ಮಂಡ್ಯ ನಗರಸಭೆ ಚುನಾವಣೆ ನಡೆದಿದೆ. ಫೈನಲಿ ಬಿಜೆಪಿ ಹಾಗೂ ಜೆಡಿಎಸ್ ಅಬವ್ಯರ್ಥಿಯೇ ಗೆಲುವು ಸಾಧಿಸಿದ್ದಾರೆ. ಆದರೆ ಇಂದು ನಗರಸಭೆ ಆವರಣದಲ್ಲಿ ದೊಡ್ಡ ಹೈಡ್ರಾಮವೇ ನಿರ್ಮಾಣವಾಗಿತ್ತು. ಕುಮಾರಸ್ವಾಮಿ ನಗರಸಭೆ ಬಳಿ ಬರುತ್ತಿದ್ದಂತೆ ಸಾಕಷ್ಟು ಗದ್ದಲ ಶುರುವಾಗಿತ್ತು. ಮಾತಿನ ಚಕಮಕಿಯೂ ನಡರಯಿತು. ಕುಮಾರಸ್ವಾಮಿ ಅವರ ವಾಹನವನ್ನು ಮಾತ್ರ ಒಳಗೆ ಬಿಟ್ಟು, ಸದಸ್ಯರ ವಾಹನವನ್ನು ಪೊಲೀಸರು ತಡೆಹಿಡಿದಿದ್ದರು‌. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ತೀವ್ರ ಕುತೂಹಲ ಮೂಡಿಸಿದ್ದ ನಗರಸಭೆ ಅಧ್ಯಕ್ಷ – ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದೆ. ಎರಡನೇ ಅವಧಿಗೆ ಮಂಡ್ಯ ನಗರಸಭೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾದರು. ಮಂಡ್ಯ ನಗರಸಭೆ ಬಿಜೆಪಿ-ಜೆಡಿಎಸ್ ಪಾಲಾಗುತ್ತಿದ್ದಂತೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಆದರೆ ಕಾಂಗ್ರೆಸ್ ಸದಸ್ಯರು ಮಾತ್ರ ಕೆರಳಿ ಕೆಂಡವಾಗಿದ್ದಾರೆ. ವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದೆ ಎಂದು ಕಾಂಗ್ರೆಸ್ ಶಾಸಕ ರವಿ ಗಾಣಿಗ ಆರೋಪಿಸಿದರು. ಇದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಶಾಸಕ ರವಿ ಗಾಣಿಗ ವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ‌. ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು..? ಮತದಾನದ ವೇಳೆಯೂ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮಿಷವೊಡ್ಡಿದ್ದಾರೆ. ನನ್ನ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ರಾಜಕೀಯ ಬೆಳವಣಿಗೆ ಗಮನಿಸಿ, ನಾನು ಬರಬೇಕಾಯಿತು. ಕ್ಯಾಬಿನೆಟ್ ಸಭೆ ಬಿಟ್ಟು ಪ್ರಧಾನಮಂತ್ರಿ ಅನುಮತಿ ಪಡೆದು, ಮತದಾನದಲ್ಲಿ ಭಾಗವಹಿಸಿದ್ದೇನೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!