Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಂಚರತ್ನ ಯಾತ್ರೆಗೆ ಹೋಗಿದ್ದವರಿಗೆ ಅಪಘಾತ : ಆಸ್ಪತ್ರೆಗೆ ಭೇಟಿ ನೀಡಿದ ಹೆಚ್ಡಿಕೆ…!

Facebook
Twitter
Telegram
WhatsApp

ಮಂಡ್ಯ: ಜಿಲ್ಲೆ ಜಿಲ್ಲೆಯಲ್ಲೂ ಜೆಡಿಎಸ್ ಪಕ್ಷ ತನ್ನ ಪಂಚರತ್ನ ರಥಯಾತ್ರೆ ಮೂಲಕ ಜನರನ್ನು ತಲುಪುತ್ತಾ ಇದೆ. ಯಾವುದೇ ಜಿಲ್ಲೆಗೆ ರಥಯಾತ್ರೆ ಸಾಗಿದರೂ, ಅಲ್ಲಿ ಸಾವಿರಾರು ಜನ ಸೇರುತ್ತಾರೆ. ಹೀಗಾಗಿ ಪಂಚರತ್ನ ರಥಯಾತ್ರೆಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ನಿನ್ನೆ ಮಂಡ್ಯ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ನಡೆದಿದೆ.

ಈ ರಥಯಾತ್ರೆ ಮುಗಿಸಿಕೊಂಡು ಜನ ವಾಪಾಸ್ಸಾಗಿದ್ದಾರೆ. ಇಒ ವೇಳೆ ಇಬ್ಬರಿಗೆ ಅಪಘಾತವಾಗಿದೆ. ಎರಡು ಪ್ರತ್ಯೇಕ ಅಪಘಾತಗಳು ನಡೆದಿದ್ದು, ಇಬ್ಬರು ಆಸ್ಪತ್ರೆ ಸೇರಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ.

ನಾಗಮಂಗಲ ತಾಲೂಕಿನ ಮೂಡಲುಕೊಪ್ಪ ಬಳಿ ಆಟೋ-ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಹನ್ನೆರಡು ಜೆಡಿಎಸ್ ಕಾರ್ಯಕರ್ತರಿಗೆ ಗಾಯವಾಗಿದೆ. ಅದರಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಇನ್ನು ಅದೇ ರಸ್ತೆಯಲ್ಲಿ ರಾತ್ರಿ ಬೈಕ್ ಬರುತ್ತಿದ್ದಾಗಲೂ ಮತ್ತೆ ಅಪಘಾತವಾಗಿದೆ. ಇದರ ಪರಿಣಾಮ ಬೈಕ್ ಸವಾರ ಆನಂದ್ ಎಂಬುವವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!