Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಮಂಗಳೂರು ದರೋಡೆ ಪ್ರಕರಣ ಬೇಧಿಸಿದ ಪೊಲೀಸರು : ಸಿಕ್ಕಿದ್ದು ಎಷ್ಟು ಕೋಟಿ ಚಿನ್ನ..!

---Advertisement---

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದರೋಡೆ ಎಂದರೆ ಅದು ಕೋಟೆಕಾರು ದರೋಡೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ದರೋಡೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ಈ ಪ್ರಕರಣವನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಟಿ ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. 18.314 ಕೆಜಿಯ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖದೀಮರು ಕದ್ದ ಚಿನ್ನ ಸುಮಾರು 14 ಕೋಟಿ ಬೆಲೆ ಬಾಳುತ್ತದೆ.

ಅಷ್ಟೇ ಅಲ್ಲ ಖದೀಮರು ಕೃತ್ಯಕ್ಕೆ ಬಳಸಿದ್ದ ಫಿಯಟ್ ಕಾರು, 2 ಮಚ್ಚು, 2 ಪಿಸ್ತೂಲು ಹಾಗೂ 3 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಹಾಗೇ ಬಂಧಿತರಿಂದ 3.80 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.‌ ಮುಂಬೈನ ಪದ್ಮನೇರಿ ಗ್ರಾಮದ ಮುರುಗುಂಡಿ ಥೇವರ್, ದೊಂಬಿನಲಿ ವೆಸ್ಟ್ ನ ಯೆಸುವಾ ರಾಜೇಂದ್ರನ್, ಕಣ್ಣಬ್ ಮಣಿ, ಷಣ್ಮುಗ ಸುಂದರಂ ಎಂಬುವವರು ಅರೆಸ್ಟ್ ಆಗಿದ್ದಾರೆ. ಬ್ಯಾಂಕ್ ನಲ್ಲಿ ದರೋಡೆ ನಡೆಸಿದ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದರು. ಅದನ್ನು ಬೇಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ ರೋಡ್ ಜಂಕ್ಷನ್ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಜನವರಿ 17ರಂದು ದರೋಡೆ ನಡೆದಿತ್ತು. ಹಾಡ ಹಗಲೇ ದರೋಡೆ ಮಾಡಿದ್ದರು. ದರೋಡೆ ಮಾಡಿದ ಬಳಿಕ ಇಬ್ಬರು ತಲಪಾಡಿ ಗೇಟಿನಿಂದ ಕೇರಳ ಕಡೆಗೆ ಪರಾರಿಯಾಗಿದ್ದರೆ, ನಾಲ್ವರು ಆರೋಪಿಗಳು ಮಂಗಳೂರು ರೈಲು ನಿಲ್ದಾಣಕ್ಕೆ ತೆರಳಿದ್ದರು. ಇವರಲ್ಲಿ ಮೂವರು ಆಟೋದಲ್ಲಿ, ಮತ್ತೊಬ್ಬ ಬಸ್ಸಿನಲ್ಲಿ ಪ್ರಯಾಣಿಸಿ ಎಸ್ಕೇಪ್ ಆಗಿದ್ದ. ಆದರೆ ಈಗ ಪೊಲೀಸರು ಬೀಸಿದ ಬಲೆಯಲ್ಲಿ ಸಿಲುಕಿದ್ದಾರೆ.k

Join WhatsApp

Join Now

Join Telegram

Join Now

Leave a Comment