ಮಂಗಳೂರು ಕುಕ್ಕರ್ ಬ್ಲಾಸ್ಟ್ : ಎನ್ಐಎ ವಶಕ್ಕೆ ಸಿಕ್ಕ ವಿದ್ಯಾರ್ಥಿ..!

suddionenews
1 Min Read

ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣ ಇಡೀ ಮಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎ ತಂಡಕ್ಕೆ ವಹಿಸಲಾಗಿದೆ. ಇದೀಗ ಒಬ್ಬ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯನ್ನು ಎನ್ಐಎ ತಂಡ ವಶಕ್ಕೆ ಪಡೆದಿದೆ. ತಾಜುದ್ದೀನ್ ಶೇಕ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ತಾಜುದ್ದೀನ್ ಶೇಕ್ ಪಿಎ ಕಾಲೇಜಿನಲ್ಲಿ ಫೈನಲ್ ಇಯರ್ ಸ್ಟುಡೆಂಟ್ ಆಗಿದ್ದಾನೆ. ಸದ್ಯ ಕುಕ್ಕರ್ ಬ್ಲಾಸ್ಟ್ ಕೇಸ್ ಗೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಆತನನ್ನು ವಿಚಾರಣೆ ಮಾಡಲು ಕರೆದುಕೊಂಡು ಹೋಗಿದ್ದಾರೆ. ತಾಹುದ್ದೀನ್ ಶೇಕ್ ಉಡುಪಿ ಮೂಲದವನಾಗಿದ್ದು, ಶಂಕಿತ ಉಗ್ರ ಮಾಝ್ ಮುನೀರ್ ಮತ್ತು ಶಾರೀಕ್ ಸಂಪರ್ಕದಲ್ಲಿದ್ದಿದ್ದು ತಿಳಿದು ಬಂದಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗೆ ಈತನನ್ನು ವಶಕ್ಕೆ ಪಡೆಯಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *