Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಣಿಪುರ ಘಟನೆ : ಚಿತ್ರದುರ್ಗದಲ್ಲಿ ಎಐಎಂಎಸ್ ಮತ್ತು ಎಐಡಿವೈಓ ಸಂಘಟನೆಗಳಿಂದ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ(ಜು.24) : ಮಣಿಪುರದಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿರುವುದರ ವಿರುದ್ಧ ಎಐಎಂಎಸ್‍ಎಸ್ ಮತ್ತು ಎಐಡಿವೈಒ ಸಂಘಟನೆಗಳು ಜಿಲ್ಲಾಧಿಕಾರಿಗಳ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಅಪರಾಧಿಗಳಿಗೆ ಕಠಿಣ ಮತ್ತು ನಿದರ್ಶನೀಯ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಲಾಯಿತು.

ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲೆ ನಡೆದ ಅಮಾನವೀಯ ಮತ್ತು ಘೋರ ಘಟನೆಯನ್ನು ಅಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ ಎಸ್) ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಓ) ಸಂಘಟನೆಗಳಯ ಉಗ್ರವಾಗಿ ಖಂಡಿಸುತ್ತವೆ.

ಮಣಿಪುರ ಎರಡು ತಿಂಗಳಿಗಿಂತ ಹೆಚ್ಚು ಕಾಲ ಹೊತ್ತಿ ಉರಿಯುತ್ತಿದೆ, ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಮಹಿಳೆಯರು ಅತ್ಯಾಚಾರಕ್ಕೊಳಗಾಗುತ್ತಿದ್ದಾರೆ. ಮಕ್ಕಳು ಅನಾಥರಾಗುತ್ತಿದ್ದಾರೆ. ಆದರೆ ಶಾಂತಿ ಸ್ಥಾಪನೆಗಾಗಿ ಸರ್ಕಾರವು ಯಾವುದೇ ದಿಟ್ಟಕ್ರಮ ಕೈಗೊಂಡಿಲ್ಲ.

ಕೋಮುವಾದಿ ಉದ್ರಿಕ್ತ ಪುಂಡರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ಮಾಡಿದೆ.
ಈ ವೀಡಿಯೋ ನೋಡಿ ಮಾನವೀಯತೆ ಉಳಿದಿರುವ ದೇಶದ ಪ್ರತಿಯೊಬ್ಬ ಪ್ರಜೆಗೂ ನಾಚಿಕೆಯಾಗುವುದರ ಜೊತೆಗೆ ಆಕ್ರೋಶ ಬರುತ್ತಿದೆ.ಇಂತಹ ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ.

ಆದರೆ ಈ ವಿಚಾರದಲ್ಲಿ ಎರಡೂ ಸರ್ಕಾರಗಳ ಮುಖ್ಯಸ್ಥರು ಮೌನವಾಗಿದ್ದಾರೆ. ಪ್ರಧಾನಿ ಯಾವುದೇ ಒಂದು ರಾಜ್ಯದವರಲ್ಲ,ಅವರು ಇಡೀ ದೇಶದವರು, ಇಡೀ ದೇಶದ ನಾಗರಿಕರ ಹಿತದೃಷ್ಟಿಯಿಂದ ಯೋಚಿಸುವುದು ಅವರ ಕರ್ತವ್ಯ. ಆದರೆ ಈ ಪ್ರಕರಣದಲ್ಲಿ ಅವರು ಹಾಗೆ ಮಾಡದೆ ಬರೋಬ್ಬರಿ ಇಂದಿನಗಳ ನಂತರ ಮೌನ ಮುರಿದಾಗ ಇಂತಹ ಗಂಭೀರ ವಿಚಾರದಲ್ಲೂ ರಾಜಕೀಯ ಮಾಡತೊಡಗಿದರು. ಇದನ್ನು ಕೂಡ ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಅದೇ ಸಮಯದಲ್ಲಿ, ದೇಶದ ಜನತೆ ಎಲ್ಲಿದ್ದರೂ, ಯಾವುದೇ ಪರಿಸ್ಥಿತಿಯಲ್ಲಿದ್ದರೂ, ಈ ಅಮಾನವೀಯ ಘಟನೆಯನ್ನು ವಿರೋಧಿಸಬೇಕಿದೆ.. ಮಣಿಪುರದ ಜನತೆ ಯಾವುದೇ ಕೋಮುವಾದಿ ಎಚ್ಛಿದ್ರಕಾರಿ ಪ್ರಚೋದನೆಗೆ ಬಲಿಯಾಗದೆ ಕೋಮುದಳ್ಳುರಿಯಲ್ಲಿ ಬೇಯುತ್ತಿರುವ ರಾಜ್ಯದಲ್ಲಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಹಾಗೂ ಜನೈಕ್ಯತೆಯನ್ನು ಎತ್ತಿಹಿಡಿಯಬೇಕೆಂದು ಅಲ್ಲದೇ, ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಅಪರಾಧಿಗಳಿಗೆ ಕಠಿಣ ಮತ್ತು ನಿದರ್ಶನೀಯ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಎಐಎಂಎಸ್ ಎಸ್ ಮತ್ತು ಎಐಡಿವೈಒ ಸಂಘಟನೆಗಳಿಂದ ಇಂದು ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯ ನೇತೃತ್ವವನ್ನು ಮುಖಂಡರಾದ ರವಿಕುಮಾರ್, ಸಂಚಾಲಕರಾದ ಕುಮುದ ಸುಜಾತ, ನಿಂಗರಾಜು, ಅರುಣ್, ಶಮಂತ್, ಗಿರಿಜಮ್ಮ, ಶ್ರೀದೇವಿ ವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

error: Content is protected !!