ಕರ್ನಾಟಕ ವಿದ್ಯಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಮಂಜುನಾಥ್ ಮತ್ತು ಉಪಾಧ್ಯಕ್ಷರಾಗಿ ರಮೇಶ್ ಬಾಬು ಅವಿರೋಧ ಆಯ್ಕೆ

1 Min Read

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.23 :  ಕರ್ನಾಟಕ ವಿದ್ಯಾ ಸಂಸ್ಥೆಯ 60 ನೇ ವಾರ್ಷಿಕ ಮಹಾ ಸಭೆಯಲ್ಲಿ ಮುಂದಿನ ಮೂರು ವರ್ಷಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನಗರದ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆಯ ಕಚೇರಿಯಲ್ಲಿ ಶುಕ್ರವಾರ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಹಾಜರಿದ್ದು ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಮಂಜುನಾಥ್.ವಿ. ಆರ್. ಉಪಾಧ್ಯಕ್ಷರಾಗಿ ರಮೇಶ್ ಬಾಬು, ಕಾರ್ಯದರ್ಶಿಯಾಗಿ ಎಂ. ಆರ್. ನಾರಾಯಣಪ್ಪನವರು, ಉಪ ಕಾರ್ಯದರ್ಶಿಯಾಗಿ ಡಿ.ಜಿ. ಪ್ರಭಾಕರ್ ರವರು, ಖಜಾಂಚಿ ಯಾಗಿ ಎಂ.ಹೆಚ್.ಆಂಜನೆಯ,
ನಿರ್ದೇಶಕರುಗಳಾಗಿ ಪದ್ಮನಾಭ ಎಂ.ಎಂ, ನಾಗರಾಜ್. ಹೆಚ್. ಎನ್., ಹೆಚ್. ಗುರುದೇವ್, ವಿಕ್ರಮ್, ಪಿ.ಎಸ್.ನಂಜುಂಡಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *