Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಮತ್ತೆ ಮಂತ್ರಿ ಮಾಲ್ ಗೆ ಬೀಗ ಬೀಳುತ್ತಿದೆ.. ಕಾರಣ ಏನ್ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ತೆರಿಗೆ ಹಣವನ್ನ ಕಟ್ಟದೆ ಇರೋ ಕಾರಣ ಮಂತ್ರಿ ಮಾಲ್ ಗೆ ಪದೇ ಪದೇ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿಯುತ್ತಿದ್ದಾರೆ. ಇಂದು ಕೂಡ ಮಂತ್ರಿ ಮಾಲ್ ಗೆ ಭೇಟಿ ನೀಡಿದ ಅಧಿಕಾರಿಗಳು ಬೀಗ ಹಾಕಿದ್ದಾರೆ.

22 ಕೋಟಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆ ಇಂದು ಬಿಬಿಎಂಪಿ, ಮಂತ್ರಿ ಮಾಲ್ ವಿರುದ್ಧ ಕ್ರಮ ಕೈಗೊಂಡಿದೆ. ಕಳೆದ ಮೂರು ವರ್ಷದಿಂದ ಟ್ಯಾಕ್ಸ್ ಕಟ್ಟದ ಮಾಲ್ ಮುಂದೆ ಹೋಗಿ ಅಧಿಕಾರಿಗಳು ಅಡ್ಡಲಾಗಿ ನಿಂತಿದ್ದಾರೆ. ಮಾಲ್ ಒಳಗೆ ಯಾರು ಹೋಗದಂತೆ ತಡೆದಿದ್ದಾರೆ. ಮಂತ್ರಿ ಮಾಲ್ 27 ಕೋಟಿ ಬಾಕಿ ಉಳಿಸಿಕೊಂಡಿದೆ. ಬಡ್ಡಿ ಎಲ್ಲಾ ಸೇರಿ 36 ಕೋಟಿ ಹಣ ಕಟ್ಟಬೇಕಾಗಿದೆ.

ಕಳೆದ ಬಾರಿಯೂ ಹೀಗೆ ಆಗಿತ್ತು. ತೆರಿಗೆ ಹಣ ಕಟ್ಟದ ಮಾಲ್ ಗೆ ಅಧಿಕಾರಿಗಳು ದಾಳಿ ಮಾಡಿದಾಗ ಸ್ಥಳದಲ್ಲೆ 5 ಕೋಟಿ ಹಣ ನೀಡಿ, ಕಾಲಾವಕಾಶ ತೆಗೆದುಕೊಂಡಿದ್ದರು. ಇದೀಗ ಬಿಬಿಎಂಪಿ ನೀಡಿದ ಕಾಲಾವಕಾಶ ಮುಗಿದಿದ್ದು, ಮತ್ತೆ ಬೀಗ ಜಡಿದಿದ್ದಾರೆ. ಸ್ಥಳದಲ್ಲಿರುವ ಅಧಿಕಾರಿಗಳು ಬಾಕಿ ಕಟ್ಟದೇ ಇದ್ದರೆ ಮಾಲ್ ಒಳಗೆ ಯಾರನ್ನು ಬಿಡಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಠ್ಯಗಳ ಜೊತೆಗೆ ದಿನಪತ್ರಿಕೆ ಓದುವ ಅಭ್ಯಾಸವಿದ್ದರೆ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ : ಡಾ. ಜಿ. ಎನ್. ಸಂದೀಪ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21 : ಶಾಲಾ ಕಾಲೇಜುಗಳ ಪಠ್ಯಗಳ ಜೊತೆಗೆ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗ್ಜಿನ್‍ಗಳನ್ನು ಓದುವ

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ

error: Content is protected !!