Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 09ರಂದು ಮ್ಯಾರಥಾನ್ ಓಟ : ಎಸ್.ಪಿ. ರಂಜಿತ್ ಕುಮಾರ್ ಬಂಡಾರು

---Advertisement---

ಚಿತ್ರದುರ್ಗ. ಮಾ.06: ಜಿಲ್ಲಾ ಪೊಲೀಸ್ ಮತ್ತು ಎಸ್‍ಬಿಐ ಬ್ಯಾಂಕ್ ಅವರ ಸಹಯೋಗದಲ್ಲಿ “ನಮ್ಮ ಪೊಲೀಸ್  ನಮ್ಮ ಹೆಮ್ಮೆ” Fitness for all” & “Drugs Free Karnataka” ಎಂಬ ಘೋಷವಾಕ್ಯಗಳೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇದೇ ಮಾರ್ಚ್ 09ರಂದು ಬೆಳಿಗ್ಗೆ 7ಕ್ಕೆ ಚಿತ್ರದುರ್ಗ ನಗರದ ಡಿಎಆರ್ ಪರೇಡ್ ಮೈದಾನದಿಂದ ಸಾರ್ವಜನಿಕರಿಗೆ 5 & 10 ಕಿಲೋಮೀಟರ್‍ಗಳ ಮ್ಯಾರಥಾನ್ ಓಟ ಆಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

 

ಈ ಮ್ಯಾರಥಾನ್ ಚಿತ್ರದುರ್ಗ ನಗರದ ಡಿ.ಎ.ಆರ್ ಪರೇಡ್ ಮೈದಾನದಿಂದ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ 5 ಕಿ.ಮೀ ಮತ್ತು 10ಕಿ.ಮೀ ಗಳ ಅಂತರ ಕ್ರಮಿಸಿದ ನಂತರ ಡಿ.ಎ.ಆರ್ ಪರೇಡ್ ಮೈದಾನದಲ್ಲಿಯೇ ಮುಕ್ತಾಯವಾಗಲಿದ್ದು, ಈ ಮ್ಯಾರಥಾನ್‍ನಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು.
ಮ್ಯಾರಥಾನ್‍ನಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಸಹ ಪೊಲೀಸ್ ಇಲಾಖೆಯಿಂದ ಟೀ-ಶರ್ಟ್ ನೀಡಲಾಗುವುದು  ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ.
ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಮ್ಯಾರಥಾನ್‍ನಲ್ಲಿ ಪಾಲ್ಗೊಳ್ಳುವುದರ ಮೂಲಕ “Fitness for all” & “Drugs Free Karnataka”  ಎಂಬ ಘೋಷಣೆಗಳೊಂದಿಗೆ ಪೊಲೀಸ್  ಇಲಾಖೆಯೊಂದಿಗೆ ಕೈಜೋಡಿಸಿ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕಾಗಿ ಕೋರಿದೆ. ಮ್ಯಾರಥಾನ್‍ನಲ್ಲಿ ಪಾಲ್ಗೊಳ್ಳುವವರು ಕ್ಯೂಆರ್ ಕೋಡ್‍ನ್ನು ಸ್ಕ್ಯಾನ್ ಮಾಡುವ ಮೂಲಕ ಆನ್‍ಲೈನ್ ರಿಜಿಸ್ಟರ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...