ಮಾರ್ಚ್ 09ರಂದು ಮ್ಯಾರಥಾನ್ ಓಟ : ಎಸ್.ಪಿ. ರಂಜಿತ್ ಕುಮಾರ್ ಬಂಡಾರು

ಚಿತ್ರದುರ್ಗ. ಮಾ.06: ಜಿಲ್ಲಾ ಪೊಲೀಸ್ ಮತ್ತು ಎಸ್‍ಬಿಐ ಬ್ಯಾಂಕ್ ಅವರ ಸಹಯೋಗದಲ್ಲಿ “ನಮ್ಮ ಪೊಲೀಸ್  ನಮ್ಮ ಹೆಮ್ಮೆ” Fitness for all” & “Drugs Free Karnataka” ಎಂಬ ಘೋಷವಾಕ್ಯಗಳೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇದೇ ಮಾರ್ಚ್ 09ರಂದು ಬೆಳಿಗ್ಗೆ 7ಕ್ಕೆ ಚಿತ್ರದುರ್ಗ ನಗರದ ಡಿಎಆರ್ ಪರೇಡ್ ಮೈದಾನದಿಂದ ಸಾರ್ವಜನಿಕರಿಗೆ 5 & 10 ಕಿಲೋಮೀಟರ್‍ಗಳ ಮ್ಯಾರಥಾನ್ ಓಟ ಆಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

 

ಈ ಮ್ಯಾರಥಾನ್ ಚಿತ್ರದುರ್ಗ ನಗರದ ಡಿ.ಎ.ಆರ್ ಪರೇಡ್ ಮೈದಾನದಿಂದ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ 5 ಕಿ.ಮೀ ಮತ್ತು 10ಕಿ.ಮೀ ಗಳ ಅಂತರ ಕ್ರಮಿಸಿದ ನಂತರ ಡಿ.ಎ.ಆರ್ ಪರೇಡ್ ಮೈದಾನದಲ್ಲಿಯೇ ಮುಕ್ತಾಯವಾಗಲಿದ್ದು, ಈ ಮ್ಯಾರಥಾನ್‍ನಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಗುವುದು.
ಮ್ಯಾರಥಾನ್‍ನಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಸಹ ಪೊಲೀಸ್ ಇಲಾಖೆಯಿಂದ ಟೀ-ಶರ್ಟ್ ನೀಡಲಾಗುವುದು  ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ.
ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಮ್ಯಾರಥಾನ್‍ನಲ್ಲಿ ಪಾಲ್ಗೊಳ್ಳುವುದರ ಮೂಲಕ “Fitness for all” & “Drugs Free Karnataka”  ಎಂಬ ಘೋಷಣೆಗಳೊಂದಿಗೆ ಪೊಲೀಸ್  ಇಲಾಖೆಯೊಂದಿಗೆ ಕೈಜೋಡಿಸಿ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕಾಗಿ ಕೋರಿದೆ. ಮ್ಯಾರಥಾನ್‍ನಲ್ಲಿ ಪಾಲ್ಗೊಳ್ಳುವವರು ಕ್ಯೂಆರ್ ಕೋಡ್‍ನ್ನು ಸ್ಕ್ಯಾನ್ ಮಾಡುವ ಮೂಲಕ ಆನ್‍ಲೈನ್ ರಿಜಿಸ್ಟರ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

Recent Posts

ಎಷ್ಟೇ ಮಾತ್ರೆ ನುಂಗಿದರು ಕೆಮ್ಮು ಕಡಿಮೆ ಆಗ್ತಿಲ್ವಾ..? ಹಾಗಾದ್ರೆ ಈ ರೀತಿ ಮಾಡಿ

ಸಾಮಾನ್ಯವಾಗಿ ಕೆಲವೊಬ್ಬರಿಗೆ ಕೆಮ್ಮು ಆದ್ರೆ ತಿಂಗಳು ಗಟ್ಟಲೇ‌ ಕಡಿಮೆ ಆಗುವುದೇ ಇಲ್ಲ. ಎಷ್ಟೇ ಮಾತ್ರೆಗಳನ್ನ ನುಂಗಿದರು ವಾಸಿಯಾಗುವುದೇ ಇಲ್ಲ. ಕೆಮ್ಮಿ…

5 hours ago

ಈ ರಾಶಿಯವರಿಗೆ ಕಷ್ಟಕಾಲದಲ್ಲಿ ಪತ್ನಿಯ ಧನ ಸಹಾಯದಿಂದ ಮರುಜೀವ

ಈ ರಾಶಿಯವರಿಗೆ ಕಷ್ಟಕಾಲದಲ್ಲಿ ಪತ್ನಿಯ ಧನ ಸಹಾಯದಿಂದ ಮರುಜೀವ, ಈ ರಾಶಿಯವರಿಗೆ ಪಿತ್ರಾರ್ಜಿತ ಆಸ್ತಿ ವಿಳಂಬ, ಈ ರಾಶಿಯವರು ತುಂಬಾ…

6 hours ago

ದಿಢೀರನೆ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು; ಕಳೆದ ಕೆಲವು ದಿನಗಳಿಂದ ಮಂಡಿ ನೋವಿನ ಸಮಸ್ಯೆಯಿಂದ ಸಿಎಂ ಸಿದ್ದರಾಮಯ್ಯ ಅವರು ಬಳಲುತ್ತಿದ್ದಾತೆ. ವೀಲ್ ಚೇರ್ ಮೇಲೆಯೇ ಓಡಾಟ…

14 hours ago

ಉದ್ಯೋಗ ವಾರ್ತೆ : ಮಾರ್ಚ್ 28ರಂದು ನೇರ ನೇಮಕಾತಿ ಸಂದರ್ಶನ

ಚಿತ್ರದುರ್ಗ. ಮಾ.25: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾರ್ಚ್ 28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2…

16 hours ago

ಹೊಸದುರ್ಗ : ಡಿಸಿಸಿ ಬ್ಯಾಂಕ್ ಉದ್ಯೋಗಿ ಲೋಕಾಯುಕ್ತ ಬಲೆಗೆ

ಸುದ್ದಿಒನ್, ಹೊಸದುರ್ಗ, ಮಾರ್ಚ್. 25 : ರೈತರು ಸಾಲಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲು 15000 ರೂಪಾಯಿ ಲಂಚ…

18 hours ago

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ವೆಂಕಟೇಶ್ ಸೂಚನೆ

ಚಿತ್ರದುರ್ಗ. ಮಾರ್ಚ್ 25: ಮುಂಬರುವ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ ರೈತರಿಗೆ ಯಾವುದೇ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಉಂಟಾಗದಂತೆ…

18 hours ago