Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಾಂಜಾ ಸಾಗಾಣಿಕೆ, ಮಾರಾಟ ಆರೋಪಿಗೆ ಎರಡು ವರ್ಷ ಜೈಲುಶಿಕ್ಷೆ

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.24) : ಅಕ್ರಮವಾಗಿ ಗಾಂಜಾ ಸಾಗಾಣಿಕೆ ಮತ್ತು ಮಾರಾಟ ಮಾಡುತ್ತಿದ್ದ ಹಿರಿಯೂರು ತಾಲ್ಲೂಕು ರಾಮಜೋಗಿಹಳ್ಳಿ ಗ್ರಾಮದ ಕೆಂಚಪ್ಪ ಎಂಬುವರಿಗೆ ಜಿಲ್ಲಾ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಹಾಗೂ ರೂ.25,000/- ದಂಡವನ್ನು ವಿಧಿಸಿ, ಜನವರಿ 13ರಂದು ತೀರ್ಪು ನೀಡಿದೆ ಎಂದು ಚಿತ್ರದುರ್ಗ ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.

ಹಿರಿಯೂರು ತಾಲ್ಲೂಕಿನ ರಾಮಜೋಗಿಹಳ್ಳಿ ಗ್ರಾಮದ ಕೆಂಚಪ್ಪ ಬಿನ್ ಲೇ.ರಂಗಪ್ಪ 70 ವರ್ಷ ಎಂಬುವರು 2018ರ ಡಿಸೆಂಬರ್ 03ರಂದು ಚಿತ್ರದುರ್ಗ ತಾಲ್ಲೂಕಿನ ಕಸಬಾ ಹೋಬಳಿ  ಕಳ್ಳಿರೊಪ್ಪ ಗ್ರಾಮದ ಹತ್ತಿರ ಸಜ್ಜನಕೆರೆ ಗ್ರಾಮದ ಕಡೆ ಹೋಗುವ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದನ್ನು ಪತ್ತೆ ಹಚ್ಚಿ 1.400 ಕೆ.ಜಿ ಒಣ ಗಾಂಜಾವನ್ನು ಜಪ್ತುಪಡಿಸಿ ಎನ್‍ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ಅಬಕಾರಿ ಉಪ ನಿರೀಕ್ಷಕ ಮೊಹಮ್ಮದ್ ಸಾದತ್ ಉಲ್ಲಾ ಅವರು ದಾಖಲಿಸಿದ್ದರು. ಪ್ರಕರಣದ ತನಿಖೆಯನ್ನು ಚಿತ್ರದುರ್ಗ ವಲಯದ ಅಬಕಾರಿ ಉಪ ನಿರೀಕ್ಷಕರು (ನಿವೃತ್ತ) ಓ.ತಿಪ್ಪಯ್ಯ ಅವರು ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಎರಡು ವರ್ಷ ಜೈಲುಶಿಕ್ಷೆ ಹಾಗೂ ರೂ.25,000/- ದಂಡವನ್ನು ವಿಧಿಸಿ ಆದೇಶಿಸಿದೆ.

2022ರ ಜನವರಿ ಮಾಹೆಯಲ್ಲಿ ಅಬಕಾರಿ ಇಲಾಖೆಯಿಂದ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಒಟ್ಟು 2 ಕೆ.ಜಿ. 180 ಗ್ರಾಮ ಒಣ ಗಾಂಜಾವನ್ನು ಜಪ್ತುಪಡಿಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿಗೊಳಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 01 ಮಾರುತಿ ಸುಜುಕಿ ಕಾರು ಮತ್ತು 01 ಹಿರೋ ಹೊಂಡಾ ಸ್ಪೆಂಡರ್ ದ್ವಿಚಕ್ರ ವಾಹನವನ್ನು ಜಪ್ತುಪಡಿಸಿ ಪ್ರಕರಣಗಳನ್ನು ಆರೋಪಿತರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿರುತ್ತದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!