Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ನೆರವೇರಿದ ಮಾರ್ಕಂಡೇಶ್ವರಸ್ವಾಮಿ ಜಯಂತಿ : ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಆಕರ್ಷಕ ಮೆರವಣಿಗೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.12 : ನೇಕಾರರ ಪದ್ಮಶಾಲಿ ಜನಾಂಗದ ಕುಲದೇವತೆ ಮಾರ್ಕಂಡೇಶ್ವರಸ್ವಾಮಿ ಜಯಂತಿ ಅಂಗವಾಗಿ ಭಾನುವಾರ ನಗರದಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಯಿತು.

ಪದ್ಮಶಾಲಿ ಬಹುತ್ತಮ ಸಮಾಜ, ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟ, ಪದ್ಮಶಾಲಿ ಯುವಕ ಸಂಘ, ಪದ್ಮಶಾಲಿ ಮಹಿಳಾ ಸಂಘ ಸಹಯೋಗದೊಂದಿಗೆ
ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಹೊರಟ ಮೆರವಣಿಗೆಯಲ್ಲಿ ನೂರಾರು ಪೂರ್ಣಕುಂಭಗಳನ್ನು ಹೊತ್ತ ಮಹಿಳೆಯರು ಗಾಂಧಿವೃತ್ತ,ಎ ಸ್.ಬಿ.ಎಂ.ವೃತ್ತ, ಒನಕೆ ಓಬವ್ವ ವೃತ್ತಕ್ಕೆ ಸಾಗಿದರು.

ಡೊಳ್ಳು, ಕುಣಿತ, ತಮಟೆ, ವೀರಗಾಸೆ ಮೆರವಣಿಗೆಯಲ್ಲಿ ಆಕರ್ಷಣೀಯವಾಗಿತ್ತು. ಸಾರೋಟಿನಲ್ಲಿ ಮಾರ್ಕಂಡೇಶ್ವರಸ್ವಾಮಿಯ ಬೃಹತ್ ಭಾವಚಿತ್ರವನ್ನು ಇರಿಸಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯುದ್ದಕ್ಕೂ ಅಲ್ಲಲ್ಲಿ ಪಟಾಕಿಗಳನ್ನು ಸಿಡಿಸಿ ಕುಣಿದು ಕುಪ್ಪಳಿಸಿದರು.

ಪದ್ಮಶಾಲಿ ಬಹುತ್ತಮ ಸಮಾಜದ ಅಧ್ಯಕ್ಷ ಬುದಾರ್ಪು ತಿಮ್ಮಪ್ಪ, ಉಪಾಧ್ಯಕ್ಷ ವರದಾ ಈ. ಭಾವನಾಮೂರ್ತಿ, ಕಾರ್ಯದರ್ಶಿ ಸೋಮ ಜಿ.ಎನ್.ಚಂದ್ರಶೇಖರಪ್ಪ,
ಸಹ ಕಾರ್ಯದರ್ಶಿ ಡಾ.ನಾರಮಂಚಿ ಎನ್.ಜಗನ್ನಾಥ್, ಖಜಾಂಚಿ ಜಾನಾ ಸೂರ್ಯನಾರಾಯಣ, ಸಂಘಟನಾ ಕಾರ್ಯದರ್ಶಿ ವಾಸೆ ಕೆ.ನಾರಾಯಣ, ನಿರ್ದೇಶಕರುಗಳಾದ ಬೈರಮುಡಿ ಹೆಚ್.ಮಂಜಪ್ಪ, ಪಲಿಮಿರಿ ಹೆಚ್.ರಾಜಶೇಖರಪ್ಪ, ಕ್ಯಾತಂ ಎನ್.ರಾಜು, ಡಾ.ಜಿಂಕಾ ಸತ್ಯನಾರಾಯಣ, ಜಾನಾ ಜಾನಕಿರಾಂ, ಶ್ರೀಮತಿ ಜಿಂಕಾ ಉಷಾದೇವಿ, ಅರವಾ ಎ.ಎನ್.ಸುರೇಶ್, ಗುರ್ರಂ ಗೋವಿಂದಪ್ಪ ಹಾಗೂ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!