Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಕಳುಹಿಸಿಕೊಟ್ಟ ಮಸಾಲೆ ದೋಸೆ ಬರಲೇ ಇಲ್ಲ : ಸಂಸದ ತೇಜಸ್ವಿ ಸೂರ್ಯ ಬೇಸರ..!

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ ಸಂಸದ ತೇಜಸ್ವಿ ಸೂರ್ಯ ಮಸಾಲೆ ದೋಸೆ ತಿಂದು ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ಅದಕ್ಕೆ ಕಾರಣ ಬೆಂಗಳೂರಿನಲ್ಲಿ ಮಳೆ ಬಂದು ಜನ ಸಂಕಷ್ಟಕ್ಕೆ ಸಿಲುಕಿದ್ದರು. ಇಂಥ ಸಂದರ್ಭದಲ್ಲಿ ಸಂಸದರಾದವರು ಮಸಾಲೆ ದೋಸೆ ತಿಂದಿದ್ದನ್ನು ವಿಡಿಯೋ ಮಾಡಿ ಹಾಕಿದ್ದರು. ಇದು ಜನ ಸಾಮಾನ್ಯರಿಗೂ ಕೋಪ ತರಿಸಿತ್ತು. ಜವಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಅಷ್ಟೇ ಅಲ್ಲದೆ ಇದೇ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದರು. ಜನ ಇಂಥ ಸ್ಥಿತಿಯಲ್ಲಿರುವಾಗ ನೀವೂ ಮಸಾಲೆ ದೋಸೆಯನ್ನು ಪ್ರಮೋಟ್ ಮಾಡುತ್ತಿದ್ದೀರಲ್ಲ ಎಂದು. ಜೊತೆಗೆ ತರಹೇವಾರಿ ಮಸಾಲೆ ದೋಸೆಯನ್ನು ಪಾರ್ಸಲ್ ಮಾಡಿಸಿ, ಸಂಸದ ತೇಜಸ್ವಿ ಸೂರ್ಯ ಮನೆಗೂ ಕಳುಹಿಸಿಕೊಟ್ಟಿದ್ದರು. ಇದೇ ವಿಚಾರಕ್ಕೆ ತೇಜಸ್ವಿ ಸೂರ್ಯ ಇದೀಗ ವ್ಯಂಗ್ಯವಾಡಿದ್ದಾರೆ.

ದೋಸೆ ವಿಚಾರದಲಲೂ ಕಾಂಗ್ರೆಸ್ ಮೋಸ ಮಾಡುತ್ತಿದೆ. ಎಲ್ಲಿದೆ ದೋಸೆ. 24 ಗಂಟೆಯಾದರೂ ನಮ್ಮ ಮನೆಗೆ ಇನ್ನು ದೋಸೆ ಬರಲೇ ಇಲ್ಲ. ಕಾಂಗ್ರೆಸ್ ನಿನ್ನೆ ಸುದ್ದಿಗೋಷ್ಟಿ ನಡೆಸಿತ್ತು. ನಮ್ಮ ಮನೆಗೆ ದೋಸೆ ಕಳುಹಿಸಿರುವುದಾಗಿ ಘೋಷಿಸಿತ್ತು. ಆದ್ರೆ 24 ಗಂಟೆಯಾದರೂ ದೋಸೆ ಬಂದಿಲ್ಲ. ಒಂದು ದೋಸೆಯನ್ನು ಸರಿಯಾಗಿ ನೀಡುವುದಕ್ಕೆ ಬರುವುದಿಲ್ಲ. ಇನ್ನು ಆಡಳಿತ ನಡೆಸುವ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!