Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಸ್ಕ್ ಮ್ಯಾನ್ ಅರೆಸ್ಟ್ ಬೆನ್ನಲ್ಲೇ ಹೆಸರು ರಿವೀಲ್ : ಬೆಳಗ್ಗೆಯಿಂದ ಏನೆಲ್ಲಾ ಆಯ್ತು ಧರ್ಮಸ್ಥಳದಲ್ಲಿ..?

---Advertisement---

ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಸಾಕ್ಷ್ಯಾಧಾರನಾಗಿ ಬಂದಿದ್ದ ಅನಾಮಧೇಯ ವ್ಯಕ್ತಿಯನ್ನು ಇವತ್ತು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ನಿನ್ನೆ 19 ಗಂಟೆಗಳ ಕಾಲ ವಿಚಾರಣೆಯನ್ನ ನಡೆಸಲಾಗಿದೆ. ಪ್ರಣಬ್ ಮೊಹಂತಿ ಅವರೇ ವಿಚಾರಣೆಯನ್ನ ನಡೆಸಲಾಗಿದೆ. ಆತ ಗುರುತಿಸಿದ ಜಾಗದಲ್ಲಿ ನೂರಾರು ಶವಗಳು ಸಿಗದೆ ಇರುವ ಕಾರಣ ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇನ್ನು ಮಾಸ್ಕ್‌ಮ್ಯಾನ್ ಅರೆಸ್ಟ್ ಆದ ಬೆನ್ನಲ್ಲೇ ಆತನ ಹೆಸರು ಕೂಡ ರಿವೀಲ್ ಆಗಿದೆ. ಚಿನ್ನಯ್ಯ ಎಂಬುದು ಆತನ ಹೆಸರಾಗಿದೆ. ಕೋರ್ಟ್ ಗೆ ಹಾಜರು ಪಡಿಸುವುದಕ್ಕೂ ಮುನ್ನ ಚಿನ್ನಯ್ಯನನ್ನ ವೈದ್ಯಕೀಯ ಪರೀಕ್ಷೆಯನ್ನ ನಡೆಸಿದ್ದಾರೆ. ಆರೋಗ್ಯದಲ್ಲಿ ಏನು ಏರುಪೇರು ಇಲ್ಲ ಎಂಬುದನ್ನ ದೃಢಪಡಿಸಿಕೊಂಡು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿಯ ಆಸ್ಪತ್ರೆಯಲ್ಲಿ ಚಿನ್ನಯ್ಯನನ್ನು ವೈದ್ಯಕೀಯ ಪರೀಜ್ಷೆ ನಡೆಸಿದ್ದಾರೆ. ಕೋರ್ಟ್ ಗೂ ಹಾಜರಾಗಿದ್ದಾರೆ.

ಇನ್ನು ದೂರುದಾರನ ವಿಚಾರಣೆಯನ್ನ ಪ್ರಣಬ್ ಮೊಹಂತಿ ನಡೆಸಿದ್ದು, ಶಾಕಿಂಗ್ ವಿಚಾರವೊಂದು ಹೊರಗೆ ಬಂದಿದೆ. ಎಸ್ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಕೋರ್ಟ್ ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಕೋರ್ಟ್ ಬಳಿ ಬಿಗಿಭದ್ರತೆಯನ್ನ ಕಲ್ಪಿಸಲಾಗಿದೆ. ಪೊಲೀಸರು, ವಕೀಲರು ಜಿತೆಗೆ ಇವತ್ತಿನ ಕಾರ್ಯಕಲಾಪಕ್ಕೆ ಸಂಬಂಧಿಸಿದವರನ್ನು ಮಾತ್ರ ಕೋರ್ಟ್ ಒಳಗೆ ಬಿಡಲಾಗಿದೆ. ಚಿನ್ನಯ್ಯನನ್ನು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಈ ಮೊದಲು ಕೋರ್ಟ್ ಗೆ ಬಂದು ತಾನೂ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದಾಗ ಸರ್ಕಾರ ಎಸ್ಐಟಿಯನ್ನು ರಚಿಸಿತ್ತು. ಆದರೆ ಆತ ಹೇಳಿದಂತೆ ಶವಗಳು ಸಿಗಲಿಲ್ಲ. ಹೀಗಾಗಿ ಆತನನ್ನು ಬಂಧಿಸಿ, ನಿಜಾಂಶ ಹೊರ ತರುವ ಪ್ರಯತ್ನವಾಗ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment