ಜನವರಿ 28 ರಂದು ಶೋಷಿತ ಸಮುದಾಯಗಳ ಬೃಹತ್ ಜಾಗೃತಿ ಸಮಾವೇಶ :  ಸಿದ್ದತೆ ಪರಿಶೀಲಿಸಿದ ಕಾಂಗ್ರೆಸ್ ನಾಯಕರು

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ಇದೇ ತಿಂಗಳ 28 ರಂದು ನಗರದ ಹೊರವಲಯ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಯಲಿರುವ ಶೋಷಿತ ಸಮುದಾಯಗಳ ಬೃಹತ್ ಜಾಗೃತಿ ಸಮಾವೇಶಕ್ಕೆ ಬೃಹಧಾಕಾರವಾದ ಪೆಂಡಾಲ್ ಸಿದ್ದವಾಗುತ್ತಿರುವುದನ್ನು ಕಾಂಗ್ರೆಸ್ ನಾಯಕರುಗಳು ಹಾಗೂ ಶೋಷಿತ ಸಮುದಾಯದವರು ಗುರುವಾರ ವೀಕ್ಷಿಸಿದರು.

ಮಾಜಿ ಸಂಸದ ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಉಪಾಧ್ಯಕ್ಷರುಗಳಾದ ಡಿ.ಟಿ.ವೆಂಕಟೇಶ್, ಎಸ್.ಎನ್.ರವಿಕುಮಾರ್, ಬಿ.ಟಿ.ಜಗದೀಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ನಂದಿನಿಗೌಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹೆಚ್.ಶಬ್ಬೀರ್‍ಭಾಷ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಮಧುಗೌಡ, ಕೆ.ಪಿ.ಸಿ.ಸಿ. ಪರಿಶಿಷ್ಟ ಜಾತಿ ವಿಭಾಗದ ಮಲ್ಲೇಶ್, ಜಿಲ್ಲಾ ಕಾಂಗ್ರೆಸ್ ಎಸ್ಸಿ.ವಿಭಾಗದ ಅಧ್ಯಕ್ಷ ಜಯಣ್ಣ, ಹೆಚ್.ಆರ್.ಮಹಮದ್, ಫೈಲ್ವಾನ್ ಸಾಧಿಕ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks