ಮಾ.17 ರಂದು ದೊಣ್ಣೆಹಳ್ಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ

suddionenews
1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 14 : ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಯನಪೋಯ ಆಸ್ಪತ್ರೆ ಮಂಗಳೂರು, ಬಸವೇಶ್ವರ ಮೆಡಿಕಲ್ ಕಾಲೇಜು ಚಿತ್ರದುರ್ಗ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಬೆಂಗಳೂರು, ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಗಳೂರು ತಾಲ್ಲೂಕು ಆರೋಗ್ಯ ಇಲಾಖೆ ಇವರುಗಳ ಸಹಯೋಗದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಮಾ.17 ರಂದು ಬೆಳಿಗ್ಗೆ 10-30 ರಿಂದ ಸಂಜೆ ಆರು ಗಂಟೆಯವರೆಗೆ ಶರಣ ಬಸವೇಶ್ವರ ದಾಸೋಹ ಮಠ ದೊಣ್ಣೆಹಳ್ಳಿಯಲ್ಲಿ ನಡೆಯಲಿದೆ.

ರಕ್ತದೊತ್ತಡ, ಮಧುಮೇಹ, ಆಸ್ತಮ, ಕೈಕಾಲು ನೋವು, ಮಕ್ಕಳ, ಮಹಿಳೆಯರ ಆರೋಗ್ಯ ಸಮಸ್ಯೆ, ಕಣ್ಣು, ಕಿವಿ, ಮೂಗು, ಗಂಟಲು, ಹೃದಯದ ಸಮಸ್ಯೆ ಕುರಿತು ತಪಾಸಣೆ ನಡೆಸಿ ಔಷಧಿಗಳನ್ನು ನೀಡಲಾಗುವುದು. ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ವೈ.ಎನ್.ಸಂತೋಷ್‍ಕುಮಾರ್, ಬಂಟನಹಳ್ಳಿ ಮಂಜುಸ್ವಾಮಿ ಇವರುಗಳು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ : 9980907301, 7019321055 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

 

Share This Article
Leave a Comment

Leave a Reply

Your email address will not be published. Required fields are marked *