Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಹಿಷಾ ದಸರಾಗೆ ಭಾರೀ ವಿರೋಧ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

 

ಮೈಸೂರು: ನಾಡಹಬ್ಬ ದಸರಾಕ್ಕೆ ಈಗಿನಿಂದಾನೇ ತಯಾರಿ ಶುರುವಾಗಿದೆ. ಇದರ‌ ನಡುವೆ ಮಹಿಷಾ‌ ದಸರಾ ಬಗ್ಗೆ ಚರ್ಚೆ ಶುರುವಾಗಿದೆ. ಅದರಲ್ಲೂ ಮಹಿಷಾ ದಸರಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾವೂ ಈ ಹಿಂದೆಯೂ ಮಹಿಷಾ ದಸರಾ ಮಾಡಿಲ್ಲ, ಈಗಲೂ ಸರ್ಕಾರದಿಂದ ಆಯೋಜನೆ‌ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ, ಯಾರೋ ಒಂದಿಷ್ಟು ಮಂದಿ ಹಿಂದಿನಿಂದಾನೂ ಮಹಿಷಾ ದಸರಾವನ್ನು ಮಾಡುತ್ತಿದ್ದಾರೆ. ಆದರೆ ಚಾಮುಂಡಿ ಬೆಟ್ಟದಲ್ಲಿ ಯಾವತ್ತು ಮಾಡಿಲ್ಲ. ಈ ವಿಚಾರದಲ್ಲಿ ಜಿಲ್ಲಾಡಳಿತವೇ ತೀರ್ಮಾನ ತೆಗೆದುಕೊಳ್ಳಬೇಕು‌ ಎಂದಿದ್ದಾರೆ. ಇತ್ತಿಚೆಗಷ್ಟೇ ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕೂಡ ಹೌಹಾರಿದ್ದರು. ಒಂದು ರೌಂಡ್ ಮೈಸೂರು ತಿರುಗಿ ನೋಡಿ, ಮಹಿಷಾಸುರನನ್ನು ಪೂಜಿಸುತ್ತಿದ್ದವರು, ಈಗ ಚಾಮುಂಡಿಯನ್ನು ಪೂಜಿಸುತ್ತಿದ್ದಾರೆ ಎಂದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ಸ್ಪಷ್ಟಪಡಿಸಿದ್ದಾರೆ.

ಇನ್ನು ಇದೇ ವೇಳೆ ಬಾರ್ ಲೈಸೆನ್ಸ್ ಬಗ್ಗೆಯೂ ಮಾತನಾಡಿದ್ದು, ಡಿಕೆ ಶಿವಕುಮಾರ್ ಅವರು ಎಲ್ಲಿಯೂ ಹೊಸ ಲೈಸೆನ್ಸ್ ಕೊಡುವ ಬಗ್ಗೆ ಹೇಳಿಲ್ಲ. ಸದ್ಯಕ್ಕೆ ಅದರ ಚರ್ಚೆಗಳು ಬೇಡ. ಜನರ ಭಾವನೆಗಳನ್ನು ಕೇಳಬೇಕು. ಗೌರವಿಸಬೇಕು ಕೂಡ. ನಾನು ಸ್ಪಷ್ಟವಾಗಿ ಹೇಳುತ್ತೇನೆ. ಹೊಸ ಲೈಸೆನ್ಸ್ ಗಳನ್ನು ನೀಡುತ್ತಿಲ್ಲ ಎಂದೇ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...