ಮೈಸೂರು: ನಾಡಹಬ್ಬ ದಸರಾಕ್ಕೆ ಈಗಿನಿಂದಾನೇ ತಯಾರಿ ಶುರುವಾಗಿದೆ. ಇದರ ನಡುವೆ ಮಹಿಷಾ ದಸರಾ ಬಗ್ಗೆ ಚರ್ಚೆ ಶುರುವಾಗಿದೆ. ಅದರಲ್ಲೂ ಮಹಿಷಾ ದಸರಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ನಾವೂ ಈ ಹಿಂದೆಯೂ ಮಹಿಷಾ ದಸರಾ ಮಾಡಿಲ್ಲ, ಈಗಲೂ ಸರ್ಕಾರದಿಂದ ಆಯೋಜನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ, ಯಾರೋ ಒಂದಿಷ್ಟು ಮಂದಿ ಹಿಂದಿನಿಂದಾನೂ ಮಹಿಷಾ ದಸರಾವನ್ನು ಮಾಡುತ್ತಿದ್ದಾರೆ. ಆದರೆ ಚಾಮುಂಡಿ ಬೆಟ್ಟದಲ್ಲಿ ಯಾವತ್ತು ಮಾಡಿಲ್ಲ. ಈ ವಿಚಾರದಲ್ಲಿ ಜಿಲ್ಲಾಡಳಿತವೇ ತೀರ್ಮಾನ ತೆಗೆದುಕೊಳ್ಳಬೇಕು ಎಂದಿದ್ದಾರೆ. ಇತ್ತಿಚೆಗಷ್ಟೇ ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕೂಡ ಹೌಹಾರಿದ್ದರು. ಒಂದು ರೌಂಡ್ ಮೈಸೂರು ತಿರುಗಿ ನೋಡಿ, ಮಹಿಷಾಸುರನನ್ನು ಪೂಜಿಸುತ್ತಿದ್ದವರು, ಈಗ ಚಾಮುಂಡಿಯನ್ನು ಪೂಜಿಸುತ್ತಿದ್ದಾರೆ ಎಂದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ಸ್ಪಷ್ಟಪಡಿಸಿದ್ದಾರೆ.
ಇನ್ನು ಇದೇ ವೇಳೆ ಬಾರ್ ಲೈಸೆನ್ಸ್ ಬಗ್ಗೆಯೂ ಮಾತನಾಡಿದ್ದು, ಡಿಕೆ ಶಿವಕುಮಾರ್ ಅವರು ಎಲ್ಲಿಯೂ ಹೊಸ ಲೈಸೆನ್ಸ್ ಕೊಡುವ ಬಗ್ಗೆ ಹೇಳಿಲ್ಲ. ಸದ್ಯಕ್ಕೆ ಅದರ ಚರ್ಚೆಗಳು ಬೇಡ. ಜನರ ಭಾವನೆಗಳನ್ನು ಕೇಳಬೇಕು. ಗೌರವಿಸಬೇಕು ಕೂಡ. ನಾನು ಸ್ಪಷ್ಟವಾಗಿ ಹೇಳುತ್ತೇನೆ. ಹೊಸ ಲೈಸೆನ್ಸ್ ಗಳನ್ನು ನೀಡುತ್ತಿಲ್ಲ ಎಂದೇ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…