ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಕರಿಕೆರೆ ತಿಪ್ಪೇಸ್ವಾಮಿ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನವೆಂಬರ್ 25ರ ಸೋಮವಾರದಂದು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಜಿಲ್ಲೆಯ ಎಲ್ಲಾ ಮಠಾಧೀಶರುಗಳ ನೇತೃತ್ವದಲ್ಲಿ ವಕ್ಫ್ ಮಂಡಳಿಯ ರೈತ ವಿರೋಧಿ ಧರ್ಮ ವಿರೋಧಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲತ್ತೆವೆ ಎಲ್ಲಾ ರೈತ ಬಾಂಧವರು ರೈತ ಸಂಘಟನೆಗಳು ಸಾಮಾಜಿಕ ಸಂಘಟನೆಗಳು ಧಾರ್ಮಿಕ ಸಂಘಟನೆಗಳು ಜಾತ್ಯತೀತರಾಗಿ ಈ ಚಳುವಳಿಯಲ್ಲಿ ಭಾಗವಹಿಸಿ, ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ರೈತರ ಪಹಣಿಯಲ್ಲಿ ಅಧಿಕಾರಿ ಗಳ ತಪ್ಪಿನಿಂದ ಹೆಸರು ತಪ್ಪಾದರೆ ವರ್ಷಗಟ್ಟೆಲೆ ಕಚೇರಿಗೆ ಅಲೆದಾಡಿ ನ್ಯಾಯಾಲಯದ ಮೆಟ್ಟಿಲೇರುವ ಸ್ಥಿತಿಯಲ್ಲೂ ಪೂರ್ವಜರ ರೈತರ ಹೆಸರಿಗಿರುವ ಜಮೀನನ್ನು ರಾತ್ರೋ ರಾತ್ರಿ ವಕ್ಟ್ ಬೋರ್ಡ್ ಹೆಸರು ಬದಲಾಯಿಸುವ ಮೂಕಕ ರೈತರ ಆಸ್ತಿ ಕಬಳಿಸುವುದನ್ನು ಕೈಬಿಡ ಬೇಕು ವಕ್ಟ್ ಬೋರ್ಡ್ ರದ್ದಾಗ ಬೇಕು ರೈತರ ಮಠಾದೀಶರ ಆಸ್ತಿ ಉಳಿಸ ಬೇಕು. ಇದನ್ನು ವಿರೋಧಿಸಿ ನ.25ರಂದು ಜಿಲ್ಲಾ ಕೇಂದ್ರ ಹಾಗೂ 26 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕಿಸಾನ್ ರೈತ ಸಂಘದಿಂದ ಪ್ರತಿಭಟನೆ ಮಾಡುವ ಮೂಲಕ ಸರಕಾರಕ್ಕೆ ಎಚ್ಚರಿಕೆ ನೀಡಲು ಮುಂದಾಗಿದ್ದೇವೆ ಎಂದರು.

ಭಾರತೀಯ ಕಿಸಾನ್ ಸಂಘದ ಪ್ರಾಂತ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಅಮೃತ ತೆರುಮಾಲ್ ಮಾತನಾಡಿ ದೇಶದಲ್ಲಿ 2013ರ ವೇಳೆ ವಕ್ಫ್ ಕಾಯ್ದೆಗೆ ಅಂದಿನ ಕೇಂದ್ರದ ಕಾಂಗ್ರೆಸ್ ಸರ್ಕಾರ ತಿದ್ದುಪಡಿ ತಂದು ಮಿತಿಮೀರಿದ ಅಧಿಕಾರ ಮಂಡಳಿಗೆ ನೀಡಿದ ಪರಿಣಾಮ 8000 ಎಕರೆಗಳಷ್ಟು ಇದ್ದ ವಕ್ಫ್ ಭೂಮಿ ಇಂದು 9,40,000 ದಷ್ಟು ಹೆಚ್ಚು ವಿಸ್ತಾರವಾಗಿದೆ ರೈತರ ಕೃಷಿ ಭೂಮಿ ಸ್ಮಶಾನ ಸರ್ಕಾರಿ ಆಸ್ತಿ ಮಠ ಮಂದಿರಗಳ ಮತ್ತು ಸಾರ್ವಜನಿಕರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಕಬಳಿಸಿ ಘೋಷಣೆ ಮಾಡಿರುವುದು ಭಯಾನಕ ಸತ್ಯವಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಕಂಡುಬಂದಿದ್ದು ಇದರ ಸಲುವಾಗಿ ಭಾರತೀಯ ಕಿಸಾನ್ ಸಂಘವು ವಕ್ಫ್ ತೊಲಗಲಿ ದೇಶ ಉಳಿಯಲಿ ಎಂಬ ಅಭಿಯಾನದ ಅಡಿಯಲ್ಲಿ ರೈತ ಘರ್ಜನೆ ರ್ಯಾಲಿಯನ್ನು ನ. 26 ಮಂಗಳವಾರ ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದು ರಾಜ್ಯದ ಸ್ವಾಭಿಮಾನಿ ರೈತರು ವಿವಿಧ ಜನಪರ ಸಂಘಟನೆಗಳು ಪಾಲ್ಗೊಂಡು ರಾಜ್ಯದಲ್ಲಿ ರೈತರ ಬದುಕಿಗೆ ಕೊಳ್ಳಿ ಇಡಲು ಹೊರಟಿರುವ ಕರಾಳ ವಕ್ ಕಾಯ್ದೆಯನ್ನು ರದ್ದುಪಡಿಸಲು ಆಗ್ರಹಿಸಿ ಕಬಳಿಸಿದ ಭೂಮಿಯನ್ನು ಉಳಿಸಿಕೊಳ್ಳಲು ಪಣ ತೊಡೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕಿಸಾನ ಸಂಘದ ಓಂಕಾರಪ್ಪ ಜಿ ತಿಪ್ಪೆಸ್ವಾಮಿ ಜ್ಞಾನೇಶ್ವರ್ ಹನುಮಂತಪ್ಪ ಸಿ ವೀರೇಶ್ ಮಂಜುನಾಥ ವೆಂಕಟೇಶ್ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

3 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago