Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಫೆಬ್ರವರಿ 16 ರಂದು ವಿವಿಧ ಸಂಘಟನೆಗಳ ಬೃಹತ್ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.12 : ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕಾರ್ಮಿಕರು, ದುಡಿಯುವ ವರ್ಗದವರಿಗೆ ಶೋಷಣೆಯಾಗುತ್ತಿರುವುದನ್ನು ವಿರೋಧಿಸಿ ಎ.ಐ.ಟಿ.ಯು.ಸಿ. ಸಿ.ಐ.ಟಿ.ಯು.
ಐ.ಎನ್.ಟಿ.ಯು.ಸಿ. ಎ.ಐ.ಸಿ.ಸಿ.ಟಿ.ಯು. ವಿವಿಧ ಸಂಘಟನೆಗಳು ಫೆ.16 ರಂದು ಬೃಹತ್ ಪ್ರತಿಭಟನೆಗೆ ಕರೆ ನೀಡಿರುವುದರಿಂದ ಜಿಲ್ಲೆಯಾದ್ಯಂತ ಅಂದು ಪ್ರತಿಭಟನೆ ನಡೆಸಲಾಗುವುದೆಂದು ಸಿ.ಐ.ಟಿ.ಯು.ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‍ಪೀರ್ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಕಾರ್ಮಿಕ ವರ್ಗದವರಿಗೆ ತಿಂಗಳಿಗೆ 31 ಸಾವಿರದ ಐದು ನೂರು ರೂ.ವೇತನ ನಿಗಧಿಪಡಿಸಬೇಕು. ನೋಟ್ ಬ್ಯಾನ್ ಒಂದು ಕಡೆಯಾದರೆ ಜಿ.ಎಸ್.ಟಿ. ಹೆಚ್ಚಿಸಿ ಬಡವರ ಮೇಲೆ ಕೇಂದ್ರ ಸರ್ಕಾರ ಬರೆ ಎಳೆಯುತ್ತಿದೆ. ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ 98 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಆರ್ಥಿಕ ಅಸಮಾನತೆ ತಾಂಡವವಾಡುತ್ತಿದೆ. ಒಟ್ಟಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ದಿನನಿತ್ಯ ಬಳಸುವ ಅಡುಗೆ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಹಾಲು, ಹಣ್ಣು, ಮೊಟ್ಟೆ ಬಡವರ ಕೈಗೆ ಸಿಗದಂತಾಗಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ರೈಲ್ವೆ ಖಾಸಗಿಯವರಿಗೆ ಮಾರಾಟವಾಗುತ್ತಿದೆ. ಗಿರಿ ಪರ್ವತಗಳನ್ನು ಬಿಟ್ಟಿಲ್ಲ. ಇಂತಹ ಸರ್ಕಾರಕ್ಕೆ ಪಾರ್ಲಿಮೆಂಟ್ ಚುನಾವಣೆಯಲ್ಲಿ ಮತದಾರರು ತಕ್ಕಪಾಠ ಕಲಿಸಬೇಕೆಂದು ಸಿ.ಕೆ.ಗೌಸ್‍ಪೀರ್ ಮನವಿ ಮಾಡಿದರು.

ಸಿಪಿಐ. ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ 25 ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆಂದು ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ಸುಳ್ಳು ಹೇಳಿ ದೇಶದ ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಕೋವಿಡ್ ಬಂದಾಗಿನಿಂದಲೂ 60 ರಿಂದ 70 ಕೋಟಿ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ. ಬ್ರಿಟೀಷರ ಕಾಲದಲ್ಲಿಯೂ ಇಂತಹ ಶೋಷಣೆಯಿರಲಿಲ್ಲ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿ ದೇಶದ ಜನರಿಗೆ ಮಂಕು ಬೂದಿ ಎರಚುತ್ತಿರುವ ಪ್ರಧಾನಿ ಮೋದಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾರರು ಸರಿಯಾದ ಪಾಠ ಕಲಿಸಬೇಕು. 44 ಕಾರ್ಮಿಕ ಕಾಯಿದೆ ಕೋಡ್‍ಗಳನ್ನು ರದ್ದುಪಡಿಸಿ ಕೇವಲ ನಾಲ್ಕು ಕೋಡ್‍ಗಳನ್ನು ಮಾತ್ರ ಉಳಿಸಿದ್ದಾರೆ. ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ. ಹಾಗಾಗಿ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಸಾರ್ವಜನಿಕರು ಫೆ. 16 ರ ಪ್ರತಿಭಟನೆಗೆ ಬೆಂಬಲಿಸುವಂತೆ ವಿನಂತಿಸಿದರು.

ಎ.ಐ.ಟಿ.ಯು.ಸಿ. ತಾಲ್ಲೂಕು ಉಪಾಧ್ಯಕ್ಷ ರಾಜಣ್ಣ, ಸಿಪಿಐ. ತಾಲ್ಲೂಕು ಸಹ ಕಾರ್ಯದರ್ಶಿ ಕಾಂ.ಸತ್ಯಕೀರ್ತಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...