ಗುರು-ಶಿಷ್ಯರ ಸಂಬಂಧಗಳು ಕಾಲ ಕಾಲಕ್ಕೆ ತಕ್ಕಂತೆ ಬದಲಾಗುತ್ತಿವೆ : ಡಾ.ಎಂ.ಕೆ.ಪ್ರಭುದೇವ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಸೆ. 16 :
ಶಿಕ್ಷಕನಾದವನು ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ತುಂಬಿದರೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ.ಎಂ.ಕೆ.ಪ್ರಭುದೇವ ತಿಳಿಸಿದರು.

ರೋಟರಿ ಕ್ಲಬ್ ಚಿನ್ಮೂಲಾದ್ರಿವತಿಯಿಂದ ನಗರದ ಎಸ್.ಆರ್.ಬಿ.ಎಂ.ಎಸ್ ರೋಟರಿ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ, ಅಭಿಯಂತರರ ದಿನಾಚರಣೆ ಮತ್ತು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಕ ಮತ್ತು ವಿದ್ಯಾರ್ಥಿಗಳ ಸಂಬಂಧಕ್ಕೆ ಅದರದೇ ಆದ ಮಹತ್ವ ಇದೆ. ಗುರು-ಶಿಷ್ಯರಲ್ಲಿ ಆತ್ಮೀಯತೆ, ವಿಶ್ವಾಸ, ನಂಬಿಕೆ,ಗೌರವ ಈ ಹಿಂದೆ ಇತ್ತು ಆದರೆ ಈಗ ಕಾಲ ಬದಲಾಗಿದೆ. ವಿದ್ಯಾರ್ಥಿಗಳಿಗೆ ಗುರುಗಳಾದವರು ವಂದಿಸಿ ಬುದ್ದಿಯನ್ನು ಹೇಳ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಗುರು-ಶಿಷ್ಯರ ಸಂಬಂಧಗಳು ಕಾಲ ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಅದರಂತೆ ಮೌಲ್ಯಗಳು ಸಹಾ ಕಡಿಮೆಯಾಗುತ್ತಿವೆ. ಹಿಂದಿನ ಕಾಲದ ಭೋದನೆಗೂ ಇಂದಿನ ಕಾಲದ ಭೋಧನೆಗೂ ಬಹಳವಾದ ವ್ಯತ್ಯಾಸ ಇದೆ, ಅದೇ ರೀತಿ ಗುರು-ಶಿಷ್ಯರಲ್ಲಿಯೂ ಸಹಾ ವಿಭಿನ್ನವಾದ ಅಭೀಪ್ರಾಯಗಳಿವೆ. ಶಿಕ್ಷಕರಾದವರ ಮೇಲೆ ಗುರುತರವಾಧ ಜವಾಬ್ದಾರಿಗಳಿವೆ, ಅದನ್ನು ಅರಿತು ಭೋದನೆಯನ್ನು ಮಾಡಬೇಕಿದೆ. ವಿದ್ಯಾರ್ಥಿಗಳನ್ನು ಉತ್ತಮ ದಾರಿಗೆ ತರುವಲ್ಲಿ ಶಿಕ್ಷಕರು ಮಾತ್ರವಲ್ಲದೆ ಪೋಷಕರು, ಸಮಾಜದ ಕರ್ತವ್ಯ, ಹೊಣೆಗಾರಿಕೆ ಜವಾಬ್ದಾರಿಯು ಸಹಾ ಇದೆ. ಇಂದಿನ ವಿದ್ಯಾರ್ಥಿಗಳ ಮನ ಸ್ಥಿತಿಯನ್ನು ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಇಂದು ನಿರ್ಮಾಣವಾಗಿದೆ ಎಂದು ಪ್ರಭುದೇವ ತಿಳಿಸಿದರು.

ಶಿಕ್ಷಕನಾದವರು ತನ್ನ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ತುಂಬುವುದರ ಮುಲಕ ಸಮಾಜಕ್ಕೆ ಉತ್ತಮವಾದ ವ್ಯಕ್ತಿಯನ್ನು ನೀಡಬೇಕಿದೆ.  ಇದೇ ರೀತಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತವಾದ ಪ್ರತಿಭೆಯನ್ನು ಸಹಾ ಹೂರಕ್ಕೆ ತರುವ ಕಾರ್ಯವನ್ನು ಮಾಡಬೇಕಿದೆ. ಆಗ ಮಾತ್ರ ಉತ್ತಮ ಶಿಕ್ಷಕನಾಗಲು ಸಾಧ್ಯವಿದೆ ಎಂದ ಅವರು, ವಿದ್ಯಾರ್ಥಿಗಳು ನಿಂತ ನೀರಾಗದೆ ಹರಿಯುವ ನೀರಾಗುವುದರ ಮೂಲಕ ತಮ್ಮ ಪ್ರತಿಭೆಯನ್ನು ಹೂರ ಹಾಕಬೇಕಿದೆ ಶಿಕ್ಷಕ-ವಿದ್ಯಾರ್ಥಿಗಳಲ್ಲಿ ಆತ್ಮೀಯತೆ ಇರಬೇಕಿದೆ. ದ್ವೇಷ ಅಸೂಯೆ ದೂರವಾಗಬೇಕಿದೆ. ಮನಸ್ಸಿನಲ್ಲಿ ಉತ್ತಮವಾದ ಭಾವನೆಯನ್ನು ಮೂಡಿಸಬೇಕಿದೆ. ಗುರು-ಶಿಷ್ಯರ ಸಂಬಂಧಗಳು ಭದ್ರವಾದ ಬುನಾದಿಯಾಗಬೇಕಿದೆ ಕವಲು ಹೊಡೆದ ದಾರಿಯಾಗಬಾರದೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಅಧ್ಯಕ್ಷರಾದ ಶಂಕರಪ್ಪ ಮಾತನಾಡಿ ಇಂದಿನ ದಿನಮಾನದಲ್ಲಿ ಒಬ್ಬ ಇಂಜಿನಿಯರ್ ಅನ್ನು ನಿರ್ಮಾಣ ಮಾಡಲು ಹಲವಾರು ಜನತೆಯ ಶ್ರಮ ಇರುತ್ತದೆ. ಪೂರ್ಣ ಪ್ರಮಾಣದಲ್ಲಿ ಕಲಿತ ಮೇಲೆ ಅತ ತನ್ನ ದೇಶವನ್ನು ಬಿಟ್ಟು ಬೇರೆ ದೇಶಕ್ಕೆ ಹಾರಿ ಹೋಗುವುದರ ಮೂಲಕ ಅಲ್ಲಿ ತನ್ನ ನಿಷ್ಠೆಯನ್ನು ತೋರಿಸುವುದರ ಮೂಲಕ ಕಲತ ತನ್ನ ದೇಶಕ್ಕೆ ದ್ರೋಹವನ್ನು ಮಾಡುತ್ತಾನೆ ಈ ಪದ್ದತಿ ಹೋಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಚಿನ್ಮೂಲಾದ್ರಿಯ ಕಾರ್ಯದರ್ಶೀ ಲಕ್ಷ್ಮೀಕಾಂತ, ಮಾಜಿ ಗೌರ್ನರ್ ಗಾಯತ್ರಿ ಶಿವರಾಂ, ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

42 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago