Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಮಾತಾ ರಮಾಬಾಯಿ ಅಂಬೇಡ್ಕರ್ ಸರ್ಕಲ್ ಉದ್ಘಾಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್ 15 : ಅಂಬೇಡ್ಕರ್ ಮುಕ್ತ ವಿಚಾರ ವೇದಿಕೆಯಿಂದ ಸರ್ಕಾರಿ ಕಲಾ ಕಾಲೇಜು ಹಿಂಭಾಗ ಮಾತಾ ರಮಾಬಾಯಿ ಅಂಬೇಡ್ಕರ್ ಸರ್ಕಲ್ ಉದ್ಗಾಟಿಸಲಾಯಿತು.

ಸಾಮಾಜಿಕ ಚಿಂತಕ ಪ್ರೊ.ಸಿ.ಕೆ.ಮಹೇಶ್ ಮಾತನಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜೀವನದಲ್ಲಿ ತಿರುವು ಕಂಡುಕೊಳ್ಳಲು ಅವರ ಪತ್ನಿ ಮಾತಾ ರಮಾಬಾಯಿ ತ್ಯಾಗವಿದೆ. ಪ್ರತಿ ದಲಿತರ ಮನೆಯಲ್ಲಿಯೂ ರಮಾಬಾಯಿಯಂತವರಿದ್ದಾರೆ. ಅವರಿಗೆ ಅವಕಾಶಗಳನ್ನು ಕೊಡಬೇಕೆಂದು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ವ್ಯಾಸಂಗಕ್ಕಾಗಿ ಅಮೇರಿಕಾಕ್ಕೆ ಹೋಗುವುದು ಬೇಡ ಎಂದು ಕುಟುಂಬದವರೆಲ್ಲಾ ಹಠ ಹಿಡಿದು ಕುಳಿತಾಗ ಪತ್ನಿ ರಮಾಬಾಯಿ ಅಮೇಕಾರಕ್ಕೆ ತೆರಳುವಂತೆ ಡಾ.ಬಿ.ಆರ್.ಅಂಬೇಡ್ಕರ್‍ಗೆ ಉತ್ತೇಜನ ನೀಡಿದರು. ಧಾರವಾಡದಲ್ಲಿದ್ದ ಅನಾಥ ಮಕ್ಕಳ ಶಾಲೆಯಲ್ಲಿ ಊಟಕ್ಕೆ ಇಲ್ಲದಂತ ಕಷ್ಟದಲ್ಲಿ ಮಾತಾ ರಮಾಬಾಯಿ ತಮ್ಮ ಮೈಮೇಲಿದ್ದ ಚಿನ್ನದ ಒಡವೆಗಳನ್ನು ಮಾರಾಟ ಮಾಡಿ ಮಕ್ಕಳಿಗೆ ಊಟ ಹಾಕುತ್ತಾರೆ. ಅಂಬೇಡ್ಕರ್‍ರವರ ಇಡಿ ಕುಟುಂಬದ ಹೊಣೆಯನ್ನು ನಿಭಾಯಿಸಿದ ಮಹಾನ್ ತ್ಯಾಗಮಯಿ ಮಾತಾ ರಮಾಬಾಯಿ ಎಂದು ಸಿ.ಕೆ.ಮಹೇಶ್ ಸ್ಮರಿಸಿದರು.

ಡಿ.ದುರುಗೇಶಪ್ಪ, ಕೆ.ಕುಮಾರ್, ಸಿ.ಎ.ಚಿಕ್ಕಣ್ಣ, ಟಿ.ರಾಮು, ವಿಶ್ವಾನಂದ, ವೇದಾಂತ್, ಸಿದ್ದೇಶ್, ಪ್ರೊ.ಕುಮಾರ್, ಚಕ್ರವರ್ತಿ, ಶಿಕ್ಷಕಿ ಬಿ.ಟಿ.ಲೋಲಾಕ್ಷಮ್ಮ, ಚಕ್ರವರ್ತಿ, ಲೇಖಕ ಹೆಚ್.ಆನಂದಕುಮಾರ್ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...