Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ ಅನೇಕರಲ್ಲಿ ಹುಟ್ಟಿಕೊಳ್ಳುತ್ತಿದೆ. ಹೀಗೆ ಒಬ್ಬೊಬ್ಬರೆ ಸಿಎಂ ಪಟ್ಟದ ಆಕಾಂಕ್ಷಿಗಳಾಗಿದ್ದು, ಹನುಮಂತನ ಬಾಲ ಬೆಳೆದಂತೆ ಬೆಳೆಯುತ್ತಿದೆ. ಇದೀಗ ಸಚಿವ ಎಂ.ಬಿ.ಪಾಟೀಲ್ ಕೂಡ ತಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆಯಂತು ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಸಿಎಂ ಆಗುವುದಕ್ಕೆ ಸೀನಿಯಾರಿಟಿ ಬೇಕಾಗಿಲ್ಲ. ಒಂದು ಮಾತು ಹೇಳುತ್ತೇನೆ, ಕಾಂಗ್ರೆಸ್ ನಲ್ಲಿ ನಾನು ಕೂಡ ಸಿಎಂ ಆಗುತ್ತೇನೆ. ವಿಜಯಪುರದಿಂದ ಸಿಎಂ ಆದರೆ ನಾನೇ ಆಗೋದು. ಶಿವಾನಂದ ಪಾಟೀಲ್ ಅಂತು ಆಗುವುದಕ್ಕೆ ಸಾಧ್ಯವಿಲ್ಲ. ಅವ್ರು ಇವಾಗ ಜನತಾದಳದಿಂದ ಕಾಂಗ್ರೆಸ್ ಗೆ ಬಂದಿರುವುದು ಎಂದಿದ್ದಾರೆ.

ಒಂದಲ್ಲ ಒಂದು ದಿನ ಸಿಎಂ ಆಗ್ತೇನೆ ಎಂದಿರುವ ಎಂಬಿ ಪಾಟೀಲ್ ಮೂಡಾ ಹಗರಣದ ಬಗ್ಗೆಯೂ ಮಾತನಾಡಿದ್ದಾರೆ. ಮುಡಾ ತಪ್ಪೇ, ಸೈಟ್ ಹಂಚಿಕೆ ಆಗಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ, ಇದರಲ್ಲಿ ಸಿದ್ದರಾಮಯ್ಯನವರ ಪಾಲು ಏನಿದೆ ? ಮುಡಾದಿಂದ ಯಾರೂ ಭಯಗೊಂಡಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡ್ತಿದ್ದೇವೆ. ಇದರಲ್ಲಿ ನಮಗೆ‌ ಜಯ ಸಿಕ್ಕೆ ಸಿಗುತ್ತದೆ. ಹಗಲು ಕನಸು ಬೇಡ, ಗವರ್ನರ್ ನಡವಳಿಕೆ ಮಾತ್ರ ಕಾನೂನು ಬಾಹಿರ ಎಂದು ಹೇಳಿದರು. ಈ ಮೂಲಕ ಸಿಎಂ ಆಗುವ ರೇಸ್ ನಲ್ಲಿ ಎಂಬಿ ಪಾಟೀಲ್ ಕೂಡ ಇರುವುದು ಸ್ಪಷ್ಟವಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!