ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈಗಾಗಲೇ ಎಲ್ಲಾ ಸಚಿವರಿಗೂ ಖಾತೆಯನ್ನು ಹಂಚಲಾಗಿದೆ. ಆದ್ರೆ ಖಾತೆ ಹಂಚಿಕೆಯಲ್ಲೂ ಒಂದಷ್ಟು ಜನರು ಅಸಮಾಧಾನಗೊಂಡಿದ್ದಾರೆ. ಇದೀಗ ಎಂಬಿ ಪಾಟೀಲ್ ಖಾತೆ ವಿಚಾರಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್, 2013ರಿಂದ 2018ರವರೆಗೆ ನಾನು ಜಲಸಂಪನ್ಮೂಲ ಸಚಿವನಾಗಿದ್ದೆ. ವಿಜಯಪುರಕ್ಕೆ ಈ ಮೊದಲು ಬರಗಾಲದ ಜಿಲ್ಲೆ ಎಂಬ ಹೆಸರಿತ್ತು. ಆದ್ರೆ ಆ ಹಣೆಪಟ್ಟಿಯಯನ್ನು ತೆಗೆದು ಹಾಕುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದೆ. ನನ್ನ ಇಚ್ಛೆ ಈಗಲೂ ನೀರಾವರಿ ಇಲಾಖೆಯನ್ನು ನಿಭಾಯಿಸುವುದೇ ಆಗಿದೆ ಎಂದಿದ್ದಾರೆ.
ಕಾರಣಾಂತರಗಳಿಂದ, ಸಿಎಂ ಪರಮಾಧಿಕಾರದಿಂದ ಖಾತೆ ಬದಲಾವಣೆಯಾಗಿದೆ. ಮುಖ್ಯಮಂತ್ರಿಗಳು ನನ್ನನ್ನು ಬೇರೆ ಖಾತೆಯನ್ನು ನಿಭಾಯಿಸುತ್ತೀಯಾ ಎಂದು ಕೇಳಿದರು. ಅದಕ್ಕೆ ನಾನು ಬೃಹತ್ ಕೈಗಾರಿಕೆ ಆಯ್ಕೆ ಮಾಡಿಕೊಂಡಿದ್ದೇನೆ. ಈಗ ನಾನು ಕೈಗಾರಿಕ ಸಚಿವರಾಗಿ ಸೇವೆ ಮಾಡುತ್ತಿದ್ದೇನೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್