Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇನ್ನಿಲ್ಲ…!

---Advertisement---

ಸುದ್ದಿಒನ್ : ಈನಾಡು ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿದ್ದ ಚೆರುಕುರಿ ರಾಮೋಜಿ ರಾವ್ ಅವರು ಇಂದು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಜೂನ್ 5 ರಂದು ಉಸಿರಾಟಕ್ಕೆ ತೊಂದರೆಯಾದ ಕಾರಣ ಅವರ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದರು. ರಾಮೋಜಿ ರಾವ್ ಅವರನ್ನು ಪರೀಕ್ಷಿಸಿದ ವೈದ್ಯರು ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆ ಹಚ್ಚಿ ಸ್ಟೆಂಟ್ ಅಳವಡಿಸಿದ್ದರು. ಎರಡು ದಿನಗಳಿಂದ ಐಸಿಯುನಲ್ಲಿದ್ದ ಅವರ ಆರೋಗ್ಯ ಶುಕ್ರವಾರ ರಾತ್ರಿ ಹದಗೆಟ್ಟಿತ್ತು. ಶನಿವಾರ ಬೆಳಗಿನ ಜಾವ 4.50ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಮೋಜಿ ರಾವ್ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಈಗ 88 ವರ್ಷ ವಯಸ್ಸಾಗಿತ್ತು.

ರಾಮೋಜಿ ರಾವ್ ಅವರು ನವೆಂಬರ್ 18, 1936 ರಂದು ಕೃಷ್ಣ ಜಿಲ್ಲೆಯ ಪೆದಪರುಪುಡಿಯಲ್ಲಿ ಸರಳ ಕೃಷಿಕ ಕುಟುಂಬದಲ್ಲಿ ಜನಿಸಿದರು. ತಾಯಿ ವೆಂಕಟಸುಬ್ಬಮ್ಮ, ತಂದೆ ವೆಂಕಟ ಸುಬ್ಬರಾವ್. ರಾಮೋಜಿ ರಾವ್ ಅವರ ಪೂರ್ವಜರು ಪಾಮೇರು ಮಂಡಲದ ಪೆರಿಶೇಪಲ್ಲಿ ಗ್ರಾಮಕ್ಕೆ ಸೇರಿದವರು. ಅವರ ಅಜ್ಜ ರಾಮಯ್ಯ ಕುಟುಂಬ ಸಮೇತ ಪೆರಿಶೇಪಲ್ಲಿಯಿಂದ ಪೆದಪರುಪುಡಿಗೆ ವಲಸೆ ಬಂದರು. ಅಜ್ಜನ ಮರಣದ 13 ದಿನಗಳ ನಂತರ ರಾಮೋಜಿ ರಾವ್ ಜನಿಸಿದರು. ಅವರ ನೆನಪಿಗಾಗಿ ಅವರ ಪೋಷಕರು ರಾಮಯ್ಯ ಎಂದು ಹೆಸರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment