Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೈದ್ಯಕೀಯ ವೃತ್ತಿ ಅತ್ಯಂತ ಪವಿತ್ರವಾದುದು : ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಹೊಳಲ್ಕೆರೆ, ಡಿಸೆಂಬರ್. 27 : ವೈದ್ಯಕೀಯ ವೃತ್ತಿ ಅತ್ಯಂತ ಪವಿತ್ರವಾದುದು ಅಮೂಲ್ಯವಾದ ಪ್ರಾಣ ಉಳಿಸುವ ಜವಾಬ್ದಾರಿ ವೈದ್ಯರುಗಳ ಮೇಲಿದೆ ಎಂದು ಸಾಣೆಹಳ್ಳಿಯ
ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಕರ್ನಾಟಕ ರಾಜ್ಯ ವಿಶ್ರಾಂತ ನೌಕರರ ಸಾಂಸೃತಿಕ ಕ್ರೀಡೆ ಮನೋರಂಜನಾ ಕೇಂದ್ರ ಬೆಂಗಳೂರು, ಹೊಳಲ್ಕೆರೆ ಶಾಖೆ ಹಾಗೂ ಮಾರುತಿ ನಿವೃತ್ತ ನೌಕರರ ಸಂಘದ ಸಹಯೋಗದೊಂದಿಗೆ ಮಲ್ಲಾಡಿಹಳ್ಳಿ ಸಮೀಪವಿರುವ ಕೆಂಗುಂಟೆ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

 

ಮೂಕ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಪಶುವೈದ್ಯರ ಸೇವೆಯೂ ಅತ್ಯಂತ ಶ್ರೇಷ್ಟವಾದುದು. ಹಾಗಾಗಿ ವೈದ್ಯರುಗಳು ಸಮಯಪ್ರಜ್ಞೆ ಮತ್ತು ಕರ್ತವ್ಯ ನಿಷ್ಟೆಯನ್ನು ಅಳವಡಿಸಿಕೊಳ್ಳಬೇಕು. ಎಲ್.ಬಿ.ರಾಜಪ್ಪನವರು ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಬೇರೆಯವರಿಗೆ ಪ್ರೇರಣೆ ನೀಡಿದಂತಾಗಿದೆ ಎಂದು ಹೇಳಿದರು.

ಪಾಂಡೋಮಟ್ಟಿ ಕಮ್ಮತ್ತಳ್ಳಿ ವಿರಕ್ತ ಮಠದ ಡಾ.ಗುರುಬಸವಸ್ವಾಮಿಗಳು ಸಾನಿಧ್ಯ ವಹಿಸಿದ್ದರು.
ಮಾರುತಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎನ್.ಸಿ.ರಾಜಣ್ಣ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮಾರುತಿ ನಿವೃತ್ತ ನೌಕರರ ಸಂಘದ ಸಂಸ್ಥಾಪಕ ಕೆಂಗುಂಟೆಯ ಡಿ.ಹೆಚ್.ಪರಮೇಶ್ವರಪ್ಪ, ಕರ್ನಾಟಕ ರಾಜ್ಯ ವಿಶ್ರಾಂತ ನೌಕರರ ಸಾಂಸ್ಕøತಿಕ ಕ್ರೀಡೆ ಮನೋರಂಜನಾ ಕೇಂದ್ರದ ಅಧ್ಯಕ್ಷ ಎಲ್.ಬಿ.ರಾಜಪ್ಪ ಕೆಂಗುಂಟೆ ಇವರುಗಳು ವೇದಿಕೆಯಲ್ಲಿದ್ದರು.
ವೈದ್ಯರುಗಳಾದ ಎಸ್.ಬಿ.ಲಕ್ಕೋಳ್, ಪ್ರಸಾದ ಎನ್.ಸಿ. ಅಶ್ವಿನಿ ಡಿ.ಹೆಚ್. ಕಿರಣ್ ಎಲ್.ಜೆ. ಶ್ರೀಪತಿ ಎನ್.ಇ. ಟಿ.ಎಸ್.ಲಕ್ಕೋಳ್, ಪವನ್ ಎಲ್.ಪಿ. ಪೂಜಾ ಎಲ್.ಪಿ., ಪಾವನ ಎನ್.ಎಸ್. ದಾಕ್ಷಾಯಿಣಿ ಡಿ.ಆರ್. ಎನ್.ಸಿ.ಪ್ರವೀಣ್, ರಶ್ಮಿ ಕೆ.ಜಿ. ಲೋಹಿತ್‍ಕುಮಾರ್ ಎಲ್.ಜೆ. ರಾಜು ಎಲ್.ಪಿ. ಶುಭ ಬಿ.ಎಸ್. ಹೇಮಂತ್ ಉಪಾಧ್ಯಾಯ ಎಸ್.ಇ. ಸಂದೇಶ್ ಕುಮಾರ್ ಲಕ್ಕೋಳ್, ಪಶು ವೈದ್ಯರುಗಳಾದ ಪ್ರಕಾಶ್ ಒ.ಎಸ್. ಸತೀಶ್ ಹೆಚ್.ಗಟ್ಟಿ, ಡಾಕ್ಟರೇಟ್ ಪದವೀಧರರುಗಳಾದ ರಾಜಪ್ಪ ಬಿ. ಪ್ರಭಾಕರ್
ಲಕ್ಕೋಳ, ರವಿ ಎಸ್.ಪಿ. ಎನ್.ಬಿ.ಗಟ್ಟಿ, ಕುಬೇರಪ್ಪ ಜಿ.ಸಿ. ಜ್ಞಾನೇಶ ಕೆ.ಎನ್. ಶಶಿಧರ ಟಿ.ಆರ್. ಮಂಜುನಾಥ ಎಲ್.ಎಂ. ಸವಿತ ಜಿ.ಲಕ್ಕೋಳ್ ಇವರುಗಳನ್ನು
ಸನ್ಮಾನಿಸಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...