ನವದೆಹಲಿ: 2026-27ನೇ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತರಾಮನ್ ಮಂಡಿಸುತ್ತಿದ್ದು, ಬಜೆಟ್ ನಲ್ಲಿ ಮೆಡಿಸನ್ ವಿಚಾರಕ್ಕೆ ಸಮಾಧಾನಕರ ವಿಚಾರ ತಿಳಿಸಿದ್ದಾರೆ. ಅದರಲ್ಲೂ ಕ್ಯಾನ್ಸರ್ ಮತ್ತು ಸಕ್ಕರೆ ರೋಗಕ್ಕೆ ಸಂಬಂಧಿಸಿದ ಔಷಧಗಳ ಬೆಲೆ ಇಳಿಕೆಯಾಗಲಿರುವ ಸುದ್ದಿಯನ್ನು ನೀಡಿದ್ದಾರೆ. ಗಂಭೀರ ಕಾಯಿಲೆಗಳ ಚಿಕಿತ್ಸಾ ವೆಚ್ಚವನ್ನು ತಗ್ಗಿಸುವ ಮತ್ತು ಆರೋಗ್ಯ ಸೇವೆಯನ್ನು ಎಲ್ಲರಿಗೂ ಕೈಗೆಟಕುವಂತೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.
ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆ ಹಾಗೂ ದಿನೇ ದಿನೇ ಹೆಚ್ಚುತ್ತಿರುವ ಸಕ್ಕರೆ ಕಾಯಿಲೆಯ ಔಷಧಗಳ ಬೆಲೆ ಇಳಿಕೆಯಾಗುತ್ತಿರುವುದು ಲಕ್ಷಾಂತರ ಕುಟುಂಬಗಳಿಗೆ ದೊಡ್ಡ ಆರ್ಥಿಕ ನೆರವು ನೀಡಲಿದೆ. ದೇಶದಲ್ಲಿ ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆಯ ಔಷಧಗಳನ್ನು ಅಗ್ಗವಾಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.
ಇನ್ನು ಕ್ಯಾನ್ಸರ್ ಮತ್ತು ಸಕ್ಕರೆ ಕಾಯಿಲೆಯ ಔಷಧಗಳ ಮೇಲಿನ ಜಿಎಸ್ಟಿ ದರವನ್ನು ಇಳಿಕೆ ಮಾಡಿರುವುದು ಬೆಲೆ ಇಳಿಕೆಗರ ಪ್ರಮುಖ ಕಾರಣವಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಕೆಲವು ಪ್ರಮುಖ ಔಷಧಗಳ ಆಮದು ಸುಂಕದಲ್ಲಿ ರಿಯಾಯಿತಿ ನೀಡಲಾಗಿದೆ. ದೇಶಿಯವಾಗಿ ಔಷಧಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದರಿಂದ ಅದೆಷ್ಟೊ ಜನಕ್ಕೆ ಸಾಕಷ್ಟು ಸಹಾಯವಾಗಲಿದೆ. ಯಾಕಂದ್ರೆ ಕ್ಯಾನ್ಸರ್ ರೋಗಕ್ಕೆ ಬೇಕಾದ ಔಷಧ ತುಂಬಾ ದುಬಾರಿಯಾಗಿದೆ. ಹೀಗಾಗಿ ಮಧ್ಯಮವರ್ಗದವರಿಗೆ ಆಸ್ಪತ್ರೆ ವೆಚ್ಚ ಭರಿಸುವುದೇ ಕಷ್ಟಕರವಾಗಿತ್ತು.










