Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಗನನ್ನು ನೋಡಲು ಸ್ವೀಟ್, ಹಣ್ಣು ಹಿಡಿದು ಬಂದ ಮೀನಾ ತೂಗುದೀಪ..!

---Advertisement---

 

 

ಇಂದು ದರ್ಶನ್ ಮೊಗದಲ್ಲಿ ಕೊಂಚ ನಗು ಕಂಡಿದೆ. ಅದಕ್ಕೆ ಕಾರಣ ಅವರ ತಾಯಿ ಮೀನಾ ತೂಗುದೀಪ. ಹೌದು ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಮೇಲೆ ದರ್ಶನ್ ಅವರನ್ನು ನೋಡಲು ಮೀನಾ ಅವರು ಬಂದಿರಲಿಲ್ಲ. ಯಾಕಂದ್ರೆ ಬೆಂಗಳೂರಿನಿಂದ ಬಳ್ಳಾರಿಗೆ 300 ಕಿಲೋ ಮೀಟರ್ ಆಗುತ್ತದೆ. ಹೀಗಾಗಿಯೇ ಮೀನಾ ಅವರು ಮಗನನ್ನು ನೋಡಲು ಬಂದಿರಲಿಲ್ಲ. ದರ್ಶನ್ ಕನವರಿಸುತ್ತಿದ್ದ ಕಾರಣಕ್ಕೆ ಜೈಲಿಗೆ ಬಂದಿದ್ದಾರೆ.

ಇಂದು ಬಳ್ಳಾರಿ ಜೈಲಿಗೆ ಅವರ ತಾಯಿ, ಅಕ್ಕ, ಭಾವ, ಮಕ್ಕಳು ಭೇಟಿ ನೀಡಿದ್ದಾರೆ. ಕುಟುಂಬಸ್ಥರನ್ನು ಕಂಡು ದರ್ಶನ್ ಕೂಡ ಕೊಂಚ ಸಮಾಧಾನಗೊಂಡಿದ್ದಾರೆ. ಜೈಲುವಾಸ ನೂರು ದಿನಗಳಾಗಿವೆ. ಪ್ರಪಂಚದ ಸಂಪರ್ಕವೇ ಇಲ್ಲದೆ ಬದುಕುತ್ತಿರುವ ದರ್ಶನ್ ಗೆ ಕುಟುಂಬಸ್ಥರನ್ನು ನೋಡಿ, ದುಃಖ ಜೋರಾಗಿದೆ. ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

ಇನ್ನು ದರ್ಶನ್ ಅವರಿಗಾಗಿ ಅವರ ಅಮ್ಮ ಸ್ವೀಟು, ಹಣ್ಣು, ಊಟ ಎಲ್ಲವನ್ನು ಎರಡು ಬ್ಯಾಗ್ ನಲ್ಲಿ ತಂದಿದ್ದಾರೆ. ಊಟಕ್ಕಿಂತ ಅಮ್ಮನನ್ನು ನೋಡಿದ ಖುಷಿ ದರ್ಶನ್ ಮುಖದಲ್ಲಿ ಕಂಡಿದೆ. ಸದ್ಯ ಜಾಮೀನಿಗೆ ಅರ್ಜಿ ಹಾಕುವುದಕ್ಕೂ ಎಲ್ಲಾ ತಯಾರಿ ನಡೆಯುತ್ತಿದೆ. ದರ್ಶನ್ ಗೆ ಜಾಮೀನು ಸಿಗಬಹುದಾ ಎಂದೆಲ್ಲಾ ಕುತೂಹಲ ಎಲ್ಲರಲ್ಲೂ ಕಾಡುತ್ತಿದೆ.

ಇನ್ನು ದರ್ಶನ್ ಅವರಿಗೆ ಧೈರ್ಯವೇ ವಿಜಯಲಕ್ಷ್ಮೀ ಹಾಗೂ ದಿನಕರ್. ಆಗಾಗ ವಿಜಯಲಕ್ಷ್ಮೀ ಹಾಗೂ ತಮ್ಮ ದಿನಕರ್ ಅವರು ಬಂದು ದರ್ಶನ್ ಅವರನ್ನು ಭೇಟಿಯಾಗಿ ಹೋಗುತ್ತಿದ್ದಾರೆ. ಸೊರಗಿ ಹೋದ, ಧೈರ್ಯ ಕಳೆದುಕೊಂಡ ದರ್ಶನ್ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಜಾಮೀನು ಸಿಗಬಹುದು ಎಂಬ ನಿರೀಕ್ಷೆಯೂ ಮನೆಯವರಲ್ಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...