Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಂದ್ ನಡುವೆ ದೆಹಲಿಯಲ್ಲಿ ಸಭೆ ನಿಗದಿ : ಕಾವೇರಿಗೆ ಪರಿಹಾರ ಸಿಗಲಿದೆಯಾ..?

---Advertisement---

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಪ್ರತಿ ದಿನ ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಲೆ ಇದೆ. ಇದನ್ನು ಖಂಡಿಸಿ ಇಂದಿ ಬೆಂಗಳೂರು ಬಂದ್ ಮಾಡಲಾಗಿದೆ. ಅಷ್ಟೇ ಅಲ್ಲ ಮಂಡ್ಯ, ಮದ್ದೂರು ಭಾಗದಲ್ಲಿ ಪ್ರತಿಭಟನೆ ಮುಂದುವರೆದಿದೆ.

ಇಂದು ಕಾವೇರಿ ವಿಚಾರವಾಗಿ ದೆಹಲಿಯಲ್ಲಿ ಸಭೆ ನಿಗಧಿಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯಿಂದ ಈ ಸಭೆ ನಡೆಯಲಾಗುತ್ತದೆ. ಈ ಸಭೆಯಲ್ಲಿ ನಾಲ್ಕು ರಾಜ್ಯಗಳ ಅಧಿಕಾರಿಗಳು ಹಾಗೂ ಸದಸ್ಯರು ಭಾಗಿಯಾಗುತ್ತಾರೆ. ಸುಪ್ರೀಂ ಕೋರ್ಟ್ ಸೂಚನೆ ಮಾಡಿದಂತೆ ನಾಳೆಗೆ ಐದು ಸಾವಿರ ಕ್ಯೂಸೆಕ್ ನೀರು ಬಿಡುವ ಸಮಯ ಅಂತ್ಯವಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾವೇರಿ ನೀರು ಬಿಡುವ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಬಹುದು.

ಕಾವೇರಿ ನೀರಿನ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ ಹದಿನೈದು ದಿನಗಳಿಗೊಮ್ಮೆ ಸಭೆ ನಡೆಸಲು ಸೂಚನೆ ನೀಡಿದೆ. ಈ ಸೂಚನೆ ಮೇರೆಗೆ ಇಂದು ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಕರ್ನಾಟಕದ ನೀರಾವರಿ ಇಲಾಖೆಯ ಕಾರ್ಯದರ್ಶಿ ಭಾಗಿಯಾಗುತ್ತಿದ್ದು, ನೀರಾವಾರಿ, ಬೆಳೆ ತಜ್ಞರು, ಹವಮಾನ ಇಲಾಖೆಯ ತಜ್ಞರು, ನೀರು ನಿಯಂತ್ರಣ ಸಮಿತಿಯ ಸದಸ್ಯರು ಭಾಗಿಯಾಗಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...