Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರೀಯ ಶಿಕ್ಷಣ ನೀತಿ (NEP) ಬಗ್ಗೆ ಅಧಿಕಾರಿಗಳೊಂದಿಗೆ ಸಭೆ : ಸಿದ್ದರಾಮಯ್ಯ ನಿರ್ಧಾರವೇನು..?

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯ ಸರ್ಕಾರ ಸದ್ಯ ಎನ್ಇಪಿ ನೀತಿಯನ್ನು ತೆಗೆದು ಹಾಕುವ ನಿರ್ಧಾರಕ್ಕೆ‌ ಬಂದಿದೆ. ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಶಿಕ್ಷಣ ಎಂದರೆ‌ ಕೇವಲ ಓದು ಬರಹ ಕಲಿಯುವುದಲ್ಲ. ಸಾಮಾಜಿಕ, ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವಂತ ಶಿಕ್ಷಣ ನೀಡಬೇಕು ಎಂದಿದ್ದಾರೆ.

ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣವನ್ನು, ಜ್ಞಾನವನ್ನು ಮಕ್ಕಳಿಗೆ ನೀಡಬೇಕು. ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಲೋಪವಾಗಬಾರದು. ಪದವೀಧರ ಯುವಕ – ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಗೆ ಪ್ರಭಾವಿತವಾಗಬಾರ್ಉ. ಬೇರೆ ಬೇರೆ ಭಾಷೆ, ಸಂಸ್ಕೃತಿ ಇರುವ ಕಾರಣ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಾಗದು. ಮಕ್ಕಳ ಉತ್ತಮ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ನೀತಿಯನ್ನು ಪುನರ್ ಪರಿಶೀಲನೆ‌ ನಡೆಸುತ್ತಿದ್ದೇವೆ. ಸಮ ಸಮಾಜ ಪರಿಸ್ಥಿತಿ ನಿರ್ಮಾಣ ಮಾಡುವ ಸಾಮರ್ಥ್ಯವನ್ನು ವಿವಿಗಳಿಗೆ ನೀಡಬೇಕು.

ರಾಜಕೀಯ, ಪ್ರಜಾಪ್ರಭುತ್ವ, ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿದ್ದಾಗ ಮಾತ್ರ ದೇಶದಲ್ಲಿ ಸಮಾನತೆ ಸಾಧ್ಯ ಎಂದು ಅಂಬೇಡ್ಕರ್‌ ಅವರು ಹೇಳಿದ್ದಾರೆ. ಅಧ್ಯಯನ ಮತ್ತು ಸಂಶೋಧನೆಗಳು ಗ್ರಂಥಾಲಯಗಳಲ್ಲಿ ಕೊಳೆಯಬಾರದು. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯ ಜೊತೆ ರಾಜಿ ಮಾಡಿಕೊಂಡು ಹೋಗುವುದಾದರೆ ಅದು ಶಿಕ್ಷಣವೇ ಅಲ್ಲ. ಒಬ್ಬ ವ್ಯಕ್ತಿ ವಿವಿಯಿಂದ ಹೊರಗೆ ಬಂದ ಮೇಲೆ ಸಮಾಜದ ಜವಾಬ್ದಾರಿ ಹೊರುವ ಶಕ್ತಿ ಇರಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!