ಅಧಿವೇಶನದ ನಡುವೆಯೇ ನಾಳೆ ಬೆಳಗಾವಿ ಬಂದ್ ಮಾಡಲು ಹೊರಟ MES..!

suddionenews
1 Min Read

ಬೆಳಗಾವಿ: ಸಾಕಷ್ಟು ಪ್ರಯತ್ನಗಳ ನಡುವೆ ಈ ಬಾರಿ ಬೆಳಗಾವಿಯಲ್ಲೇ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ನಡುವೆ ಎಂಇಎಸ್ ಮುಖಂಡರು ನಾಳೆ ಬೆಳಗಾವಿ ಬಂದ್ ಮಾಡಲು ಹೊರಟಿದ್ದಾರೆ.

ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದ ಕಾರಣ ನಾಳೆ ಬಂದ್ ಗೆ ಕರೆ ನೀಡಲಾಗಿದೆ. ಎಂಇಎಸ್ ಮಾಜಿ ಶಾಸಕ ಮನೋಹರ್ ಕಿಣೇಕರ್ ಬಂದ್ ಗೆ ಕರೆ ನೀಡಿದ್ದಾರೆ. ಜೊತೆಗೆ ನಾಳೆಯ ಬಂದ್ ಯಶಸ್ವಿ ಮಾಡಲು ಕಾರ್ಯಕರ್ತರಿಗೆ ಕರೆ ನೀಡಲಾಗಿದೆ.

ಇನ್ನು ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ. ಹಿನ್ನೆಲೆ ಬಂದ್ ಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜನ್, ಚಳಿಗಾಲದ ಅಧಿವೇಶನ ಇರುವ ಕಾರಣ ನಾಳೆ ಬೆಳಗಾವಿ ಬಂದ್ ಗೆ ಅನುಮತಿ ನೀಡಲ್ಲ. ಬಂದ್ ಗೆ ಕರೆ ನೀಡಿದವರ ಜೊತೆ ಮಾತನಾಡುತ್ತೇವೆ ಎಂದಿದ್ದಾರೆ.

ಮಹಾಮೇಳಾವ್ ನಡೆಸಲು ಯತ್ನಿಸಿದ ಹಿನ್ನೆಲೆ ಎಂಇಎಸ್ ಮುಖಂಡರ ಮೇಲೆ ಕನ್ನಡ ಕಾರ್ಯಕರ್ತರು ಪಾಠ ಕಲಿಸಿದ್ದಾರೆ. ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತ ಮಸಿ ಬಳಿದಿದ್ದಾನೆ.

Share This Article
Leave a Comment

Leave a Reply

Your email address will not be published. Required fields are marked *