Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮತ್ತೊಂದು ಚಂಡಮಾರುತದ ಸುಳಿವು ಕೊಟ್ಟ ಹವಮಾನ ಇಲಾಖೆ : ಚಿತ್ರದುರ್ಗ ಸೇರಿ ಹಲವೆಡೆ ಭಾರೀ ಮಳೆ..!

---Advertisement---

ಬೆಂಗಳೂರು: ಈಗಷ್ಟೇ ಡಾನಾ ಚಂಡಮಾರುತದಿಂದ ರಾಜ್ಯ ಕೂಡ ಸುಧಾರಿಸಿಕೊಂಡಿದೆ. ರೈತರು ಕೊಯ್ಲಿನತ್ತ ಗಮನ ಹರಿಸುತ್ತಿದ್ದಾರೆ. ಆದರೆ ಈಗ ಮತ್ತೊಂದು ಚಂಡಮಾರುತದ ಸುಳಿವು ನೀಡಿದೆ ಹವಮಾನ ಇಲಾಖೆ. ತಮಿಳುನಾಡಿನಲ್ಲಿ ಚಂಡಮಾರುತದ ಸುಳಿವು ನೀಡಲಾಗಿದೆ. ಇದರ ಪರಿಣಾಮ ಕರ್ನಾಟಕದಲ್ಲೂ ಮುಂದಿನ ನಾಲ್ಕು ದಿನಗಳ ಕಾಲ ಜೋರು ಮಳೆಯಾಗುವ ಸೂಚನೆ ನೀಡಲಾಗಿದೆ.

ಅದರಲ್ಲೂ ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಬೆಂಗಳೂರು, ಚಾಮರಾಜನಗರ, ಮೈಸೂರಿನಲ್ಲಿ ಈಗಾಗಲೇ ಮಳೆಯಾಗಿದ್ದು, ನಾಲ್ಕು ದಿನಗಳ ಕಾಲ ಮಳೆ‌ಮುಂದುವರೆಯಲಿದೆ ಎನ್ನಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಕರಾವಳಿ ಭಾಗ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಅದರಲ್ಲೂ ಚಿಕ್ಕಮಗಳೂರು, ಚಾಮರಾಜನಗರ ಮತ್ತು ಕೊಡಗು ಭಾಗಗಳಿಗೆ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಈ ಬಾರಿ ಮುಂಗಾರು ಮಳೆಯೂ ಉತ್ತಮವಾಗಿದ್ದು, ಹಿಂಗಾರು ಮಳೆಯೂ ಉತ್ತಮವಾಗಿ ಸುರಿದಿದೆ. ಅದರಲ್ಲೂ ಹಿಂ್ಇನ ವರ್ಷಗಳಿಗೆ ಹೋಲಿಕೆ ಮಾಡಿದರೆ ಉತ್ತಮ ಮಳೆಯಾಗಿದೆ ಎಂದೇ ಹೇಳಲಾಗಿದೆ.

ಡಾನಾ ಚಂಡಮಾರುತದಿಂದ ರಾಜ್ಯವೂ ತತ್ತರಿಸಿ ಹೋಗಿತ್ತು. ಬೆಂಬಿಡದೆ ಒಂದೇ ಸಮನೆ ಮಳೆ ಸುರಿದಿದ್ದರ ಪರಿಣಾಮ ಬೆಂಗಳೂರು ಜನತೆ ಹೈರಾಣಾಗಿದ್ದರು. ಎಲ್ಲೆಂದರಲ್ಲಿ ನೀರು ಮಯವಾಗಿತ್ತು. ದೋಣಿಗಳು ಓಡಾಡುವಂತ ಸಮುದ್ರದ ಊರಾಗಿತ್ತು. ಹಲವು ಜಿಲ್ಲೆಗಳಲ್ಲಿ ರೈತರಿಗೂ ಸಂಕಷ್ಟ ಎದುರಾಗಿತ್ತು. ಅದರಲ್ಲೂ ಬೆಳೆ ನಾಶದಿಂದ ತರಕಾರಿ ಬೆಲೆ ಗಗನಕ್ಕೇರಿತ್ತು. ಬೆಳೆ ನಾಶದಿಂದ ರೈತರು ಸಂಕಷ್ಟಕ್ಕೊಳಗಾಗಿದ್ದರು. ಸದ್ಯ ವರುಣರಾಯ ಬಿಡುವು ಕೊಟ್ಟಿದ್ದಾನೆ. ಇದು ಕೊಯ್ಲು ಮಾಡುವ ಸಮಯ ಎಂದು ನಿಟ್ಟುಸಿರು ಬಿಡುವಾಗಲೆ ಮತ್ತೆ ಚಂಡ ಮಾರುತದ ಸೂಚನೆ ಆತಂಕ ಉಂಟು ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...