Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೈಕ್ರೋ ಫೈನಾನ್ಸ್ ಕಿರುಕುಳ : ಜಾಮೀನು ರಹಿತ ಕೇಸ್ ಕಾಯ್ದೆ : ಸರ್ಕಾರದ ನಿರ್ಧಾರವೇನು..?

---Advertisement---

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದೆ. ಸಾಲ ಕಟ್ಟಲು ಆಗದೆ ಇದ್ದರೆ ಮನೆಗಳನ್ನೇ ಕಿತ್ತುಕೊಂಡಿದ್ದಾರೆ, ಕೆಟ್ಟದಾಗಿ ಮಾತಾಡಿದ್ದಾರೆ, ಬದುಕನ್ನೇ ಬೀದಿಗೆ ತಂದಿದ್ದಾರೆ. ಹೆಚ್ಚಾದ ದಾದಾಗಿರಿಯನ್ನು ತಪ್ಪಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಇಂದು ಮಹತ್ವದ ಸಭೆ ನಡೆಸಿದ್ದಾರೆ. ಮೈಕ್ರೋ ಫೈನಾನ್ಸ್ ಗಳಿಗೆ ಒಂದು ಹೊಸ ಕಾಯ್ದೆಯನ್ನು ತರುವುದಕ್ಕೆ ಮುಂದಾಗಿದೆ.

ಕರ್ನಾಟಕ ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್ ಆಫ್ ರೆಗುಲೇಷನ್ ಆಫ್ ಮನಿ ಲೆಂಡಿಂಗ್ ಬಿಲ್ ತರುವುದಕ್ಕೆ ಸರ್ಕಾರ ಮುಂದಾಗಿದೆ. ಹೊಸ ಕಾಯ್ದೆಯ ಮೂರು ಪ್ರಮುಖ ಅಂಶಗಳನ್ನು ಇಲ್ಲಿ ಉಲ್ಲೇಖ ಮಾಡಲಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ಕಾಗ್ನಿಜೆಬಲ್ ಅಫೆನ್ಸಗ ಎಂದು ಪರಿಗಣಿಸುವುದು, ಹೊಸ ಕಾನೂನೂನಿನ ಅಡಿ ಕೇಸ್ ದಾಖಲಿಸಿದರೆ ಅದು ಜಾಮೀನು ರಹಿತ, ಹೊಸ ಕಾಯ್ದೆಯ ಪ್ರಕಾರ ಮೂರು ವರ್ಷ ಕಠಿಣ ಶಿಕ್ಷೆ ವಿಧಿಸುವುದು ಈ ಮೂರು ವಿಚಾರಗಳು ಪ್ರಮುಖವಾದುದ್ದಾಗಿದೆ.

ಈ ಕಾಗ್ನಿಜಬಲ್ ಅಪರಾಧ ಎಂದರೆ, ಪೊಲೀಸ್ ಅಧಿಕಾರಿಯು ವಾರೆಂಟ್ ಇಲ್ಲದೆಯೇ ಅಪರಾಧಿಯನ್ನು ಬಂಧಿಸಬಹುದು. ನ್ಯಾಯಾಲಯದ ಅನುಮತಿ ಇಲ್ಲದೆ ತನಿಖೆಯನ್ನು ಪ್ರಾರಂಭಿಸಬಹುದು. ಕಾನೂನಿನ ಪ್ರಕಾರ ಒಬ್ಬ ಪೊಲೀಸ್ ಅಧಿಕಾರಿಯೂ ವಾರೆಂಟ್ ಅಥವಾ ನ್ಯಾಯಾಲಯದ ಅನುಮತಿ ಇಲ್ಲದೆ ಅಪರಾಧಿಯನ್ನು ಬಂಧಿಸಬಹುದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದ ಆರೋಪಗಳು, ದೂರುಗಳು ಬಂದರೆ ಪೊಲೀಸರು ತಕ್ಷಣವೇ ಬಂಧಿಸಬಹುದು. ಕಿರುಕುಳ ನೀಡಿದ ಮೈಕ್ರೋ ಫೈನಾನ್ಸ್ ವಿರುದ್ಧ ಜಾಮೀನು ರಹಿತ ಸೆಕ್ಷನ್ ಅಡಿ ಕೇಸ್ ದಾಖಲಿಸಲು ಅವಕಾಶವಿದೆ. ಈ ಮೂಲಕ ಮೂರು ಪ್ರಮುಖ ಅಂಶಗಳೊಂದಿಗೆ ಕಾಯ್ದೆಯನ್ನು ಜಾರಿಗೆ ತರುವುದಕ್ಕರ ಕಾನೂನು ಇಲಾಖೆ ಸಿದ್ಧಪಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಭೆ ಬಳಿಕ ಈ ಕಾಯ್ದೆಗಳನ್ನು ಜಾರಿಗೆ ತರಲಿದೆ ಎನ್ನಲಾಗುತ್ತಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...