Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನ ಜಿಲ್ಲೆಯ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತ : ಮನೆಯಿಂದ ಊಟ ತರುವಂತೆ ಸೂಚನೆ..!

Facebook
Twitter
Telegram
WhatsApp

 

ಹಾಸನ: ಹಲವು ವರ್ಷಗಳಿಂದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ನೀಡಲಾಗುತ್ತಿದೆ. ಆದ್ರೆ ಹಾಸನದ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತಗೊಂಡಿದೆ ಎನ್ನಲಾಗುತ್ತಿದೆ. ಹೀಗಾಗಿ ಶಿಕ್ಷಕರು ಕೂಡ ಮಕ್ಕಳಿಗೆ ಮನೆಯಿಂದಾನೇ ಊಟ ತರುವಂತೆ ಸೂಚನೆ ನೀಡಿದ್ದಾರೆ.

ಶಾಲಾ‌ ಮಕ್ಕಳಿಗೆ ನೀಡುವ ಬಿಸಿಯೂಟದ ರೇಷನ್ ವ್ಯತ್ಯಯವಾಗುತ್ತಿರುವ ಹಿನ್ನೆಲೆ ಬಹುತೇಕ ಶಾಲೆಗಳಲ್ಲಿ ಬಿಸಿಯೂಟ ಸಿಗುತ್ತಿಲ್ಲ. ಅಕ್ಕಿ, ಬೇಳೆ ಸೇರಿದಂತೆ ಅಡುಗೆಗೆ ಬೇಕಾದ ಯಾವ ಪದಾರ್ಥವೂ ಸಪ್ಲೈ ಆಗುತ್ತಿಲ್ಲ. ಹೀಗಾಗಿ ಶಾಲೆಯ ಶಿಕ್ಷಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ 20 ದಿನದಿಂದ ಈ ಸಮಸ್ಯೆ ಶಾಲೆಗಳಲ್ಲಿ ಕಾಡುತ್ತಿದೆ. ಹೀಗಾಗಿ ಮಕ್ಕಳು ಹಸಿದುಕೊಂಡು ಇರಬಾರದು ಎಂಬ ಕಾರಣಕ್ಕೆ‌ ಶಿಕ್ಷಕರು‌ ಮಕ್ಕಳಿಗೇನೆ ಸೂಚನೆ ನೀಡಿದ್ದಾರೆ. ಮನೆಯಿಂದಾನೇ ಬಾಕ್ಸ್ ತನ್ನಿ ಎಂದಿದ್ದಾರೆ.

ಈ ಕಡೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಹತ್ತು ಕೆಜಿ ಅಕ್ಕಿ ನೀಡುತ್ತೇವೆ ಎಂದು ಸೂಚನೆ ನೀಡಿತ್ತು. ಆದ್ರೆ ಕೇಂದ್ರ ಸರ್ಕಾರದಿಂದ ಬೆಂಬಲ ಸಿಗುತ್ತಿಲ್ಲ. ಅಕ್ಕಿ ಬದಲು ಹಣ ಕೊಡ್ತೇವೆ ಎಂದಿದ್ದಾರೆ. ಈಗ ಬಿಸಿಯೂಟದ ರೇಷನ್ ಗೂ ತಾಪತ್ರಯ ಎದುರಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!