Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ : 80 ಅಭ್ಯರ್ಥಿಗಳಿಗೆ ಉದ್ಯೋಗ

Facebook
Twitter
Telegram
WhatsApp

ಬಳ್ಳಾರಿ (ಮಾ.11) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ “ಅಜಾದಿ ಕಾ ಅಮೃತ ಮಹೋತ್ಸವ’’ ನಿಮಿತ್ತ ನಗರದ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗಮೇಳ ಜರುಗಿತು. 80 ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿದೆ.

ಈ ಮೇಳದಲ್ಲಿ ಸುಮಾರು ಆರು ಕಂಪನಿಗಳು ಪಾಲ್ಗೊಂಡು ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಂಡರು.

ಒಟ್ಟು 387 ಅಭ್ಯರ್ಥಿಗಳು ಈ ಮೇಳದಲ್ಲಿ ಪಾಲ್ಗೊಂಡಿದ್ದರು. 80 ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿದೆ. 17 ಅಭ್ಯರ್ಥಿಗಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಉದ್ಯೋಗ ವಿನಿಯಮ ಅಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದರು.

ಎಸ್ಸೆಸ್ಸೆಲ್ಸಿಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಎಎನ್‍ಎಂ, ಡಿಜಿಎನ್‍ಎಂ, ಬಿಎಸ್ಸಿ ನರ್ಸಿಂಗ್, ಬಿ.ಇ (ಮೆಕ್ಯಾನಿಕಲ್), ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಿದ್ದರು.

ಮೇಳದಲ್ಲಿ ಪಾಲ್ಗೊಂಡ ಅಭ್ಯರ್ಥಿಗಳನ್ನು ಉದ್ದೇಶಿಸಿ ಜಿಲ್ಲಾ ಉದ್ಯೋಗ ವಿನಿಯಮ ಅಧಿಕಾರಿ ಪಿ.ಎಸ್.ಹಟ್ಟಪ್ಪ ಮಾತನಾಡಿದರು ಮತ್ತು ಆರು ಕಂಪನಿಗಳ ಉದ್ಯೋಗದಾತರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

error: Content is protected !!