ಸಿದ್ದರಾಮಯ್ಯ ಜಾತಿ ಆಧಾರದ ಮೇರೆಗೆ ವಿದ್ಯಾರ್ಥಿ ಸಮೂಹ ಇಬ್ಬಾಗ ಮಾಡಿದ್ದರು : ಸಚಿವ ಎ ನಾರಾಯಣಸ್ವಾಮಿ

ಚಿತ್ರದುರ್ಗ: ಪಠ್ಯ ಪರಿಷ್ಕರಣೆ ಬಳಿಕ ಸಾಕಷ್ಟು ವಿವಾದ ಎದ್ದಿದ್ದು, ಹೆಡ್ಗೇವಾರ್ ಪಠ್ಯ ಸೇರ್ಪಡೆಗೂ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಸಚುವ ಎ ನಾರಾಯಣಸ್ವಾಮಿ, ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಮ್‌ ಹೆಡಗೇವಾರ್‌ ಪಠ್ಯಕ್ಕೆ ವಿರೋಧ ವ್ಯಕ್ತಪಡಿಸುವ ಕಾಂಗ್ರೆಸ್‌ ನಾಯಕರು ಸ್ವಾತಂತ್ರ್ಯ ಹೋರಾಟಗಾರರೇ ಎಂದು ಪ್ರಶ್ನಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನವನ್ನು ಕಾಂಗ್ರೆಸ್‌ ಮಾಡುತ್ತಿದೆ. ಆರ್‌ಎಸ್‌ಎಸ್‌ ಸಿದ್ಧಾಂತವನ್ನು ವಿರೋಧಿಸಲು ಅನ್ಯ ಮಾರ್ಗ ತುಳಿಯುತ್ತಿದೆ. ಈ ಎಲ್ಲವನ್ನೂ ಮೆಟ್ಟಿ ನಿಲ್ಲುವ ಶಕ್ತಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಇದೆ. ಹಿಂದುಳಿದ ವರ್ಗದ ನಾಯಕರೆಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿದ್ಯಾರ್ಥಿ ಸಮೂಹವನ್ನು ಜಾತಿ ಆಧಾರದ ಮೇರೆಗೆ ಇಬ್ಬಾಗ ಮಾಡಿದ್ದರು ಎಂದಿದ್ದಾರೆ.

ಪ್ರವಾಸದ ನೆಪದಲ್ಲಿ ಮಕ್ಕಳಲ್ಲಿ ತಾರತಮ್ಯ ಮಾಡಿಸಿದ್ದರು. ಆಗ ಅಶಾಂತಿ ಸೃಷ್ಟಿಯಾಗಿರಲಿಲ್ಲವೇ. ಕುರುಬ ಸಮುದಾಯದ ಪರಿಶಿಷ್ಟ ಪಂಗಡದ ಬೇಡಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಆಡಿದ ಮಾತುಗಳು ಸರಿ ಇಲ್ಲ ಎಂದಿದ್ದಾರೆ.

suddionenews

Recent Posts

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

28 minutes ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

53 minutes ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

1 hour ago

ವಿಜಯೇಂದ್ರ ನೇತೃತ್ವದಲ್ಲಿಯೇ ತಾಲೂಕು, ಜಿಲ್ಲಾ ಪಂಚಾಯತಿಗೆ ಸ್ಪರ್ಧೆ : ರೇಣುಕಾಚಾರ್ಯ

    ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…

2 hours ago

ತುಮಕೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ವಿದ್ಯುತ್ ವ್ಯತ್ಯಯ…!

  ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…

2 hours ago

ಭಾರತ vs ಪಾಕಿಸ್ತಾನ : 25 ವರ್ಷಗಳ ಹಳೆಯ ದಾಖಲೆ ಮುರಿದ ಕಿಂಗ್ ಕೊಹ್ಲಿ

    ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…

2 hours ago