ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಧರಿಸಿ ಬಂದಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನ ಪ್ರಾಂಶುಪಾಲರು ಗೇಟಿನಲ್ಲೇ ನಿಲ್ಲಿಸಿದ್ದರು. ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಹಿಜಾಬ್ ಅವರ ಮೂಲಭೂತ ಹಕ್ಕು ಎಂದಿದ್ದಾರೆ.
ಇದೀಗ ಆ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಮಾತನಾಡಿದ್ದು, ರಾಜಕೀಯ ಹಾಳು ಮಾಡಿದ್ದಾಯಿತು ಈಗ ಶಿಕ್ಷಣವನ್ನು ಹಾಳು ಮಾಡೋದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೆಲವೊಂದು ಪಕ್ಷ ರಾಜಕೀಯ ಮಾಡೋದಕ್ಕೆ ಹುಟ್ಟಿಕೊಂಡಿವೆ. ಅವರಿಗೆ ರಾಷ್ಟ್ರದ ಪ್ರಗತಿ, ಏಕತೆ ಬಗ್ಗೆ ಕಾಳಜಿ ಇಲ್ಲ. ಅಂತವರು ಮತಕ್ಕಾಗಿ ಯಾರಿಗೆ ಬೇಕಾದ್ರೂ ಬೆಂಬಲ ನೀಡ್ತಾರೆ.
2018ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಒಂದು ರೂಲ್ ಮಾಡಿದ್ರು. ಅದು ರೂಲ್ 11ರ ಅನ್ವಯ ಯೂನಿಫಾರ್ಮ್ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿದೆ. ಅಷ್ಟೇ ಅಲ್ಲ ಅವರು ಸ್ವತಃ ವಕೀಲರಾಗಿದ್ದವರು. ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ರಘುಪತಿ ಭಟ್ ಬಗ್ಗೆ ಏಕವಚನದಲ್ಲಿ ಮಾತಾಡ್ತಾರೆ. ಅದು ಅವರಿಗೆ ಶೋಭೆಯಲ್ಲ. ಯೂನಿಫಾರ್ಮ್ ಏನು ಬಿಜೆಪಿ ಸರ್ಕಾರ ಬಂದಾಗ ಬಂದಿದ್ದಲ್ಲ ಎಂದು ಶಿಕ್ಷಣ ಸಚಿವ ಬಿ ಸಜ ನಾಗೇಶ್ ಸಿದ್ದರಾಮಯ್ಯ ಮೇಲೆ ಆಕ್ರೋಶಗೊಂಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…