Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗೆ ಅಸಮಾಧಾನ ಹೊರ ಹಾಕಿದ ಮಾಧುಸ್ವಾಮಿ..!

Facebook
Twitter
Telegram
WhatsApp

ಬೆಳಗಾವಿ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಮುಸ್ಲಿಂ ವಿರುದ್ಧ ಕೆಲ ಹಿಂದೂಪರ ಸಂಘಟನೆಗಳು ಹರಿಹಾಯುತ್ತಿದ್ದಾರೆ. ಈ ಎಲ್ಲಾ ಘಟನೆಗಳ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಮಾತನಾಡಿ ಅಸಮಾಧಾನ ಹೊರ ಹಾಕಿದ್ದಾರೆ.

ಈ ರೀತಿಯ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವಂತದ್ದಲ್ಲ. ಯಾರಿಗೋ ತೊಂದರೆ ಕೊಡುವುದು, ಶಾಂತಿ ಕದಡುವುದನ್ನು ಮಾಡುವುದು ಗೌರವ ತರುವುದಿಲ್ಲ. ಆಡಳಿತ ಮಾಡಬೇಕು ಎಂದರೆ ಎಲ್ಲರೂ ಈ ದೇಶದ ಪ್ರಜೆಗಳು ಒಂದೇ ಎಂದು‌ ಭಾವಿಸಬೇಕು. ಆಕಸ್ಮಿಕವಾಗಿ ನಡೆಯುವುದು ಬೇರೆ. ಆದರೆ ಹುಡುಕಿಕೊಂಡು ಹೋಗುವುದನ್ನು ಯಾರು ಒಪ್ಪುವುದಿಲ್ಲ ಎಂದಿದ್ದಾರೆ.

ಇದೇ ವೇಳೆ ಬೆಂಗಳೂರಿನಲ್ಲಿ ನಡೆದ ಚಂದ್ರು ಕೊಲೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಗೃಹ ಮಂತ್ರಿಗಳಿಗೆ ಸರಿಯಾಗಿ ಮಾಹಿತಿ ನೀಡಿಲ್ಲ. ಗೃಹ ಸಚಿವರು ತಕ್ಷಣ ರಿಯಾಕ್ಟ್ ಮಾಡಿದ್ದು, ಗೊಂದಲಕ್ಕೆ‌ ಕಾರಣವಾಗಿದೆ. ಸಮಾಧಾನವಾಗಿ ಯೋಚಿಸಿ ಉತ್ತರಿಸಬೇಕು. ಶಾಂತಿ ಇರುವ ಕಡೆ ಅಭಿವೃದ್ಧಿಗೆ ಬೆಲೆ ಜಾಸ್ತಿ. ಶಾಂತಿ ಕದಡಿದರೆ ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್‌ಎಸ್‌ಎಲ್‌ಸಿ ಫಲಿತಾಂಶ : 625 ಕ್ಕೆ 620 ಅಂಕ ಗಳಿಸಿದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ

ಸುದ್ದಿಒನ್, ಚಿತ್ರದುರ್ಗ, ಮೇ. 09 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.   ಈ ಬಾರಿಯ

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ

ಮುಂಗಾರು, ಸಂಭಾವ್ಯ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸದಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ

error: Content is protected !!