Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಲಕ್ಷ್ಮೀ ಯೋಜನೆಯ ಹಣ ವರ್ಗಾವಣೆಯಾಗದೆ ಇರುವುದಕ್ಕೆ ಕಾರಣ ತಿಳಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಸಂದಾಯವಾಗಿಲ್ಲ. ಇದು ಮಹಿಳೆಯರ ಬೇಸರಕ್ಕೆ ಕಾತಣವಾಗಿದೆ. ವರಮಹಾಲಕ್ಷ್ಮೀ ಹಬ್ಬ ಬೇರೆ ಹತ್ತಿರ ಬಂತು. ಹಬ್ಬಕ್ಕೆ ಸರ್ಕಾರದಿಂದ ಕೊಡುಗೆ ಎಂಬಂತೆ ಎಲ್ಲರಿಗೂ ಬಾಕಿ ಉಳಿದ ಗೃಹಲಕ್ಷ್ಮೀ ಹಣ ಸಂದಾಯವಾಗುತ್ತೆ ಎಂದೇ ಹೇಳಿದ್ದರು. ಆದರೆ ಆ ಹಣ ಇನ್ನು ಯಜಮಾನಿಯ ಅಕೌಂಟ್ ಗೆ ಕ್ರೆಡಿಟ್ ಆಗಿಲ್ಲ. ಯಾಕೆ ಎಂಬುದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚುವ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಗೆ ಪ್ರತಿ ತಿಂಗಳು 2,400 ಕೋಟಿ ಹಣ ಖರ್ಚಾಗುತ್ತದೆ. ಮಂಡ್ಯದಲ್ಲಿ ಡಿಪಿಟಿಗೆ ಪುಷ್ ಮಾಡಿ ಮೂರು ದಿನಗಳಾಗಿವೆ. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ ಹಣ ಸಿಗಬೇಕಿದೆ. ಗೃಹಲಕ್ಷ್ಮೀ ಹಣವನ್ನು ಬ್ಯಾಂಕ್ ಗಳಿಗೆ ಕಳುಹಿಸಿದ್ದೇವೆ. ಸ್ಥಳೀಯ ಮಟ್ಟದಲ್ಲಿ ಮನೆಯ ಯಜಮಾನಿಯರ ಖಾತೆಗೆ ಹಣ ವರ್ಹಾವಣೆಯಾಗಬೇಕು. ಹೀಗಾಗಿ ತಡವಾಗುತ್ತಿದೆ.

ಜೊತೆಗೆ ದೊಡ್ಡ ಮೊತ್ತವಾಗಿರುವ ಖಾತೆಗಳಿಗೆ ಜಮೆಯಾಗಲು ತಡವಾಗುತ್ತಿದೆ. ಜೂನ್ ತಿಂಗಳ ಹಣ ವರ್ಗಾವಣೆಯಾಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನದಲ್ಲಿ ಖಾತೆಗಳಿಗೆ ಬರಲಿದೆ. ಆಗಸ್ಟ್ ತಿಂಗಳ ಹಣ ಕೂಡ ಯಜಮಾನಿಯರ ಖಾತೆಗೆ ವರ್ಗಾವಣೆ ಮಾಡುತ್ತೇವೆ. ವಿಳಂಬ ಆಗಬಾರದು ಎಂಬುದು ನಮ್ಮ ಚಿಂತನೆ. ದಿನಕ್ಕೆ ನನಗೆ 500 ಕರೆಗಳು ಬರಯತ್ತವೆ. ಮಂತ್ರಿಯಾಗಿ ಎಲ್ಲಾ ಕರೆಗಳಿಗೂ ನಾನು ಉತ್ತರ ನೀಡುತ್ತಿದ್ದೇನೆ. ಹಣ ವರ್ಗಾವಣೆಯಾಗುತ್ತೆ ಎಂದು ಸಮಾಧಾನ ಮಾಡುತ್ತಾ ಇರುತ್ತೇನೆ. ವಿಳಂಬವಾಗದಂತೆ ನೋಡಿಕೊಳ್ಳಲು ನಮ್ಮ ತಂಡ ಹಗಲು ರಾತ್ರಿ ಕೆಲಸ ಮಾಡುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!