ಸಚಿವ ಮಧು ಬಂಗಾರಪ್ಪ ಜನ್ಮ ದಿನಾಚರಣೆ : ವೃದ್ಧಾಶ್ರಮದಲ್ಲಿ ಹಣ್ಣು ಹಂಪಲು ವಿತರಣೆ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮಾ. 02 : ಜಿಲ್ಲಾ ಕಾಂಗ್ರೆಸ್ ಇತರೆ ಹಿಂದುಳಿದ ವರ್ಗಗಳ ವಿಭಾಗದಿಂದ  ಕರ್ನಾಟಕ ರಾಜ್ಯ ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರು ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರ ಜನ್ಮ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಇತರ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎನ್.ಡಿ. ಕುಮಾರ್ ನೇತೃತ್ವದಲ್ಲಿ ಕಬೀರಾನಂದಶ್ರಮದ ವೃದ್ಧಾಶ್ರಮದಲ್ಲಿ ಹಣ್ಣು ಹಂಪಲು ಬ್ರೆಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎನ್.ಡಿ.ಕುಮಾರ್ ನಮ್ಮ ನಾಯಕರು ಜನ್ಮ ದಿನಾಚರಣೆಯನ್ನು ಆಡಂಬರವಿಲ್ಲದೆ ಅನಾಥ ಮಕ್ಕಳಿಗೆ, ವೃದ್ಧಾಶ್ರಮದಲ್ಲಿನ ವೃದ್ದರಿಗೆ ಹಾಗೂ ಬಡವ ಬಲ್ಲಿದರಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎಂದು ಹೇಳಿದರು.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್‍ಪೀರ್ ಮಾತನಾಡಿ ಒಳ್ಳೆಯ ದಿನವನ್ನು ಮತ್ತಷ್ಟು ಒಳ್ಳೆಯದನ್ನು ಮಾಡಲು ದಾನ ಧರ್ಮ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಟಿಪ್ಪು ಕಾಸಿಂಆಲಿ. ರವಿಕುಮಾರ್ ನಗರಸಭೆ ನಾಮ ನಿರ್ದೇಶಕ ಸದಸ್ಯರಾದ ಶಬ್ಬೀರ್ ಸಂದೀಪ್ ಹಾಜರಿದ್ದರು.

Share This Article
Enable Notifications OK No thanks