Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಲಾ ಕಟ್ಟಡ ಉದ್ಘಾಟಿಸಲು ಕಚ್ಚಾಡಿದ ಎಂಟಿಬಿ ನಾಗರಾಜ್ ಮತ್ತು ಶರತ್ ಬಚ್ಛೇಗೌಡ..!

Facebook
Twitter
Telegram
WhatsApp

ಹೊಸಕೋಟೆ: ಜನಪ್ರತಿನಿಧಿಗಳು ಎಂದರೆ ಒಂದರ್ಥದಲ್ಲಿ ಮಾದರಿಯಾಗಿಯೇ ಇರಬೇಕು. ಆದ್ರೆ ಇವರುಗಳೇ ಚಿಕ್ಕಮಕ್ಕಳಂತೆ ಕಚ್ಚಾಡಿದರೆ ನೋಡುವ ಜನರಿಗೆ ಹೇಗನ್ನಿಸಬೇಡ. ಅಂತದ್ದೆ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಅದು ಕಟ್ಟಡವೊಂದರ ಉದ್ಘಾಟನೆಗಾಗಿ ನಡೆದ ಗಲಾಟೆಯಿದು.

ಮುತ್ಸಂದ್ರ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಇಂದು ನೆರವೇರಿತ್ತು. ಆ ಕಟ್ಟಡ ಉದ್ಘಾಟನೆಗೆ ಸಚಿವರು ಶಾಸಕರನ್ನು ಕರೆಸಲಾಗಿತ್ತು. ಈ ವೇಳೆ ಸಚಿವ ಎಂಟಿಬಿ ನಾಗರಾಜ್ ಟೇಪ್ ನಾನೇ ಕಟ್ ಮಾಡ್ಬೇಕು ಎನ್ನುತ್ತಿರುವಾಗಲೇ ಶಾಸಕ ಶರತ್ ಬಚ್ಚೇಗೌಡ ಅವರು ತಟ್ಟೆಯಲ್ಲಿದ್ದ ಕತ್ತರಿ ಎತ್ತಿಕೊಂಡು ಟೇಪ್ ಕಟ್ ಮಾಡಿದರು.

ಇದು ಸಾಮಾನ್ಯವಾಗಿಯೇ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಕೋಪ ತರಿಸಿದೆ. ಎಲ್ಲವನ್ನು ಸಹಿಸಿಕೊಂಡು ಕಟ್ಟಡದ ಒಳಗೆ ಹೋಗಿದ್ದಾರೆ. ಒಳಗಡೆ ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿ ಜಗಳ ಶುರುವಾಗಿದೆ. ಇಬ್ಬರ ನಡುವಿನ ಜಗಳ ನೋಡುತ್ತಾ ಅಲ್ಲಿದ್ದವರೆಲ್ಲಾ ಶಾಕ್ ಆಗಿದ್ದಾರೆ. ಈ ಜಗಳ ನೋಡಿ ಸಾಮಾನ್ಯ ಜನ ಇವ್ರೆಲ್ಲ ಜನಪ್ರತಿನಿಧಿಗಳ ಎಂಬ ಪ್ರಶ್ನೆಯನ್ನ ತಮ್ಮಲ್ಲೆ ಕೇಳಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!