Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಿಎಂ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಆದ್ರಂತೆ ಮುನಿರತ್ನ : ಸಂತ್ರಸ್ತೆ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ‌ ಮುನಿರತ್ನ ವಿರುದ್ಧ ಸಂತ್ರಸ್ತೆ ಸ್ಪೋಟಕ ವಿಚಾರ ಬಾಯ್ಬಿಟ್ಟಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿರುವ ಸಂತ್ರಸ್ತೆ, ಮುನಿರತ್ನ ಸಚಿವರಾಗಿದ್ದು ಹೇಗೆ ಎಂಬುದನ್ನು ತಿಳಿಸಿದ್ದಾರೆ.

ಮುನಿರತ್ನ ಅವರು ಮಾಜಿ ಮುಖ್ಯಮಂತ್ರಿಗಳೊಬ್ಬರಿಗೆ ಹನಿಟ್ರ್ಯಾಪ್ ಮಾಡಿಸಿದ್ದಾರೆ. ಮುನಿರತ್ನ ಬಳಿ ಮಾಜಿ ಮುಖ್ಯಮಂತ್ರಿಗಳ ವಿಡಿಯೋ ಇದೆ. ಆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿಯೇ ಮುನಿರತ್ನ ಅವರು ಮಂತ್ರಿ ಸ್ಥಾನ ಪಡೆದುಕೊಂಡಿದ್ದರು. ಅವರ ಕೃತ್ಯಗಳನ್ನು ಸಹಿಸಲಾರದೆ ದೂರು ದಾಖಲಿಸಿದ್ದೇವೆ. 2020ರಲ್ಲಿ ಬಿಜೆಪಿ ಶಾಸಕ ಮುನಿರತ್ನ ಪರಿಚಯವಾಗಿದ್ದಾರೆ. ಮಮತಾ, ವೆಂಕಟೇಶ್ ಎಂಬುವವರ ಮೂಲಕ ಪರಿಚಯವಾಗಿದ್ದರು. ಶಾಸಕ ಮುನಿರತ್ನ ನನಗೆ ವಿಡಿಯೋ ಕರೆ ಕೂಡ ಮಾಡಿದ್ದಾರೆ. ಒಂದು ದಿನ ಗೋದಾಮಿನ ಬಳಿಯೂ ಕರೆದುಕೊಂಡು ಹೋಗಿದ್ದರು. ಅಲ್ಲಿ ನನ್ನನ್ನು ಹೆದರಿಸಿ, ಅತ್ಯಾಚಾರ ಮಾಡಿದ್ದಾರೆ. ಅವರು ಜಾಮೀನು ಪಡೆದು ಹೊರಗೆ ಬಂದರೆ ನನಗೆ ಜೀವ ಭಯವಿದೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ಮುನಿರತ್ನ ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಅದನ್ನು ಇಟ್ಟುಕೊಂಡು ಅವರು ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದ್ದಾರೆ. ಒಂದು ದಿನ ನನ್ನನ್ನು ಗೋಡೌನ್ ಬಳಿ ಕರೆದಿದ್ದ ಮುನಿರತ್ನ ನನ್ನನ್ನು ಎರಡನೇ ಮಹಡಿಗೆ ಕರೆದುಕೊಂಡು ಹೋಗಿದ್ದರು. ತಬ್ಬಿಕೊಳ್ಳಲು ಬಂದಿದ್ದರು. ಆಗ ದೂರ ತಳ್ಳಿದ್ದೆ. ನೀವೂ ತಂದೆ ಸಮಾನ ಸರ್ ಬಿಟ್ಟು ಬಿಡಿ ಎಂದು ಹೇಳಿದ್ದೆ. ಆಗ ದಿವಾನ್ ಮೇಲೆ ಕೂರಿಸಿಕೊಂಡು, ನನ್ನನ್ನು ಎಂಎಲ್ಎ ಆಗಿ ನೋಡುತ್ತಿದ್ದೀಯಾ. ನಾನೊಬ್ಬ ಕಾಂಟ್ರಾಕ್ಟರ್ ಎಂದು ಹೇಳಿದ್ದರು. ಅಲ್ಲದೆ ನನ್ನನ್ನು ಹೆದರಿಸಿ ದಿವಾನ್ ಕಾಟ್ ಮೇಲೆಯೇ ಅತ್ಯಾಚಾರ ಮಾಡಿದ್ದರು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

error: Content is protected !!