Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವ ನಾಗೇಂದ್ರ ರಾಜೀನಾಮೆ : ಸಿದ್ದರಾಮಯ್ಯ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಹಣದ ವ್ಯವಹಾರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮಕ್ಕೆ ಸಂಬಂಧಪಟ್ಟ ನಿಗಮದ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದೇ ಹೇಳಲಾಗಿತ್ತು. ಈ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಸ್ಐಟಿ ರಚನೆಯಾಗಿ ಇನ್ನೂ ಎರಡು ದಿವಸ ಆಗಿದೆಯಷ್ಟೇ. ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ವರದಿ ನೀಡಿಲ್ಲ. ಸಚಿವ ನಾಗೇಂದ್ರ ಅವರಿಂದ ನಾವೂ ಯಾವುದೇ ವಿವರಣೆ ಕೇಳಿಲ್ಲ. ರಾಜೀನಾಮೆಗೆ ಗಡುವು ಕೊಡುವುದಕ್ಕೆ ಬಿಜೆಪಿಗರು ಯಾರು..? ವಿಪಕ್ಷ ಇರುವುದು ಹೋರಾಟ ಮಾಡುವುದಕ್ಕೆಂದು. ಯಾರೂ ನನಗೆ ಬೆದರಿಕೆಯನ್ನು ಹಾಕಿಲ್ಲ  ಎಂದಿದ್ದಾರೆ.

ಇದೇ ವೇಳೆ ಎಕ್ಸಿಟ್ ಪೋಲ್ ಬಗ್ಗೆ ಮಾತನಾಡಿ, ನಾವೂ ಎಕ್ಸಿಟ್ ಪೋಲ್ ಅನ್ನು ಒಪ್ಪುವುದಿಲ್ಲ. ಕರ್ನಾಟಕದಲ್ಲಿ ನಾವೂ 15-20 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಚುನಾವಣೆ ಬಗ್ಗೆ ಮಾತನಾಡಿ, ಜೂನ್ 13ರಂದು ವಿಧನಾಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ನಮ್ಮ ಪಕ್ಷದಿಂದ 7 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ ನ 7 ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. 9-20 ಮತಗಳು ಬೇಕು. ನಮ್ಮ ಸಂಖ್ಯಾ ಬಲದ ಆಧಾರದ ಮೇಲೆ ಗೆಲ್ಲುತ್ತೇವೆ. ಬಿಜೆಪಿಯ ಮೂವರು, ಜೆಡಿಎಸ್ ನ ಒರ್ವ ಅಭ್ಯರ್ಥಿ ಕಣದಲ್ಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಾಲ್ಮೀಕಿ ನಿಗಮದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಎಸ್ಐಟಿ ತೀವ್ರ ತನಿಖೆ ನಡೆಸುತ್ತಿದ್ದು, ಈಗಾಗಲೇ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ತೀವ್ರ ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜುಲೈ 15ರಿಂದ ಆರಂಭವಾಗಲಿದೆ ಮುಂಗಾರು ಅಧಿವೇಶನ : ವಿಪಕ್ಷಗಳ ಫ್ಲ್ಯಾನ್ ಏನು..?

ಬೆಂಗಳೂರು: ಹತ್ತು ದಿನಗಳ ಕಾಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಜುಲೈ 15 ರಿಂದ ಜುಲೈ 26ರ ತನಕ ಮುಂಗಾರು ಅಧಿವೇಶನ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಅಧಿವೇಶನದ ದಿನಾಂಕವನ್ನು ಫೈನಲ್ ಮಾಡಿದ್ದಾರೆ. ಈ

ಭದ್ರಾ ಮೇಲ್ದಂಡೆ, ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಚಿವ ಡಿ.ಸುಧಾಕರ್ ಸೂಚನೆ

  ಚಿತ್ರದುರ್ಗ. ಜುಲೈ.01:   ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ

ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಿ : ಡಾ. ಬಸವಕುಮಾರ ಸ್ವಾಮೀಜಿ

ಸುದ್ದಿಒನ್, ಚಿತ್ರದುರ್ಗ, ಜು.01 : ವೈದ್ಯಕೀಯ ಪದವಿಯನ್ನು ಪೂರೈಸಲು ಜೀವನದ ಅರ್ಧ ಹಾದಿಯನ್ನು ಸವೆಸಬೇಕಾಗುತ್ತದೆ. ಹಾಗಾಗಿ ವೈದ್ಯರು ನಿಷ್ಠೆ, ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ಡಾ. ಬಸವಕುಮಾರ ಸ್ವಾಮಿಗಳು ಹೇಳಿದರು. ನಗರದ ಬಸವೇಶ್ವರ

error: Content is protected !!