Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕವಾಡಿಗರಹಟ್ಟಿಗೆ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ :ತತಕ್ಷಣವೇ ಸರ್ಕಾರದಿಂದ ಪರಿಹಾರ ಧನ ನೀಡಲು ಸೂಚನೆ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಕರ್ನಾಟಕ ವಾರ್ತೆ .ಆ.4:   ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಮನೆಗಳಿಗೆ ಶುಕ್ರವಾರ ಸಂಜೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತತಕ್ಷಣವೇ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆ ವಿವರದ ಬಗ್ಗೆ  ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ಪರಿಹಾರ ನೀಡುವಲ್ಲಿ ವಿಳಂಬ ಸಲ್ಲದು. ರಾಜ್ಯ ಸರ್ಕಾರ ನೀತಿಯಂತೆ ಪರಿಹಾರ ನೀಡುವುದರ ಜೊತೆಗೆ, ಸರ್ಕಾರದ ಸೌಲಭ್ಯಗಳನ್ನು ನೀಡುವ ಕುರಿತು ಯೋಚಿಸಲಾಗುವುದು. ಕುಟುಂಬದವರ ನೋವಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಗ್ರಾಮಸ್ಥರಿಗೆ ನೀರಿನ ಮಾದರಿಗಳ ವಿಧಿ ವಿಜ್ಞಾನ ಪರೀಕ್ಷೆ ಮೇಲೆ ಅನುಮಾನ ಇದ್ದರೆ, ಪುನರ್ ತನಿಖೆ ಮಾಡಲಾಗುವುದು ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಿಂದ ಮಾಹಿತಿ ಪಡೆದ ಸಚಿವರು, ಅಗತ್ಯ ಬಿದ್ದರೆ ಚಿಕಿತ್ಸೆ ಪಡೆಯುತ್ತಿರುವವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗಳಿಗೆ ದಾಖಲಿಸುವಂತೆ ತಿಳಿಸಿದರು.

ದಲಿತ ಸಂಘಟನೆಯ ಮುಖಂಡರು ಸಚಿವರಿಗೆ ಘಟನೆ ಕಾರಣರಾದ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಮೃತರ ಕುಟುಂಬಕ್ಕೆ ಸರ್ಕಾರದಿಂದ ಬರಬೇಕಾದ ಸವಲತ್ತುಗಳನ್ನು ತುರ್ತಾಗಿ ಕಲ್ಪಿಕೊಡುವಂತೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವಿರೇಂದ್ರ, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಸೇರಿದಂತೆ ಮತ್ತಿರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...