Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಹಲ್ಗಾಮ್ ಗೆ ತೆರಳಿ ಕನ್ನಡಿಗರ ಸುರಕ್ಷತೆಗೆ ನಿಂತ ಸಚಿವ ಸಂತೋಷ್ ಲಾಡ್..!

---Advertisement---

ಹುಬ್ಬಳ್ಳಿ; ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಕನ್ನಡಿಗರು ಇದ್ದಾರೆ. ಹಿಂದುಗಳನ್ನೆ ಹುಡುಕಿ ಕೊಂದ ಉಗ್ರರ ಸಂಹಾರಕ್ಕೆ ಕೇಂದ್ರ ಸರ್ಕಾರ ಟೊಂಕ ಕಟ್ಟಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪಹಲ್ಗಾಮ ತಲುಪಿದ್ದಾರೆ. ಕನ್ನಡಿಗರ ರಕ್ಷಣೆಯನ್ನು ಮಾಡಬೇಕೆಂದು ಸೂಚನೆ ನೀಡಿದ್ದಾರೆ. ಹೀಗಾಗಿಯೇ ಪಹಲ್ಗಾಮ ತಲುಪಿದ್ದಾರೆ.

ಜಮ್ಮು ಕಾಶ್ಮಿರಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಪ್ರವಾಸಿಗರ ಮೇಲೆ ಉಗ್ರರು ಅಟ್ಯಾಕ್ ಮಾಡಿದ್ದಾರೆ. 27ಕ್ಕೂ ಹೆಚ್ಚು ಮಂದಿ ಅಸು ನೀಗಿದ್ದಾರೆ. ಇದರಲ್ಲಿ ಕರ್ನಾಟಕದ ಇಬ್ಬರು ಮೃತ ಪಟ್ಟಿದ್ದಾರೆ. ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆಂದು ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸಚಿವ ಸಂತೋಷ್ ಲಾಡ್ ಗೆ ಸೂಚನೆ ನೀಡಿದ್ದಾರೆ. ಹುಬ್ಬಳ್ಳಿಯಿಂದ ಶ್ರೀನಗರಕ್ಕೆ ತೆರಳಿದ ಸಂತೋಷ್ ಲಾಡ್ ಅವರಿಗೆ ಜರ್ನಿ ಸುಲಭವಾಗಿರಲಿಲ್ಲ. ಸಾಕಷ್ಟು ಹರಸಾಹಸ ಪಟ್ಟುಕೊಂಡು ಹೋಗಿದ್ದಾರೆ. ದಾಳಿ ನಡೆದ ವಿಚಾರ ತಿಳಿದ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ರಾತ್ರಿ 9.30ಕ್ಕೆ ಕರೆ ಮಾಡಿ ಪಹಲ್ಗಾಮಕ್ಕೆ ತೆರಳುವಂತೆ, ಅಲ್ಲಿನ ಕನ್ನಡಿಗರ ಸುರಕ್ಷತೆಯ ಜೊತೆಗೆ ನಿಲ್ಲುವಂತೆ ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದ ಕಾರಣಕ್ಕೆ ಧಾರವಾಡ ಪ್ರವಾಸದಲ್ಲಿದ್ದ ಸಂತೋಷ್ ಲಾಡ್ ಅವರು ಅದನ್ನು ನಿಲ್ಲಿಸಿ, ನೇರ ಶ್ರೀಗರ ಹೊರಡುವ ಪ್ಲ್ಯಾನ್ ಮಾಡಿಕೊಂಡರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾತ್ರಿ 10 ಗಂಟೆಗೆ ಬಂದ ಸಂತೋಷ್ ಲಾಡ್ ಅವರಿಗೆ ವಿಶೇಷ ವಿಮಾನದ ವ್ಯವಸ್ಥೆಯೇ ಕಷ್ಟಕರವಾಗಿತ್ತು. ಎರಡೂವರೆ ಗಂಟೆಗಳ‌ಕಾಲ ಪರದಾಡಿದ ನಂತರ ಮುಂಬೈ ಮೂಲದ ಕಂಪನಿಯೊಂದು ಸಂತೋಷ್ ಲಾಡ್ ಅವರಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ಮಾಡಿತು. ಬೆಳಗಿನ ಜಾವ ತಲುಪಿದ ಅವರು ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವ ಕೆಲಸದಲ್ಲಿ ತೊಡಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...