ಮೃತ ಹರ್ಷನ ಕುಟುಂಬಕ್ಕೆ ಒಂದು ಲಕ್ಷ ಹಣ ನೀಡಿದ ಸಚಿವೆ ಶೋಭಾ ಕರಂದ್ಲಾಜೆ..!

suddionenews
1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಹರ್ಷನ ಕುಟಹಂಬಕ್ಕೆ ಆರ್ಥಿಕ ಸಹಾಯವನ್ನು ಮಾಡಿದ್ದಾರೆ.

 

ಮೃತ ಹರ್ಷನ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ವೈಯಕ್ತಿಕವಾಗಿ 1 ಲಕ್ಷ ಹಣದ ಆರ್ಥಿಕ ಸಹಾಯ ನೀಡಿದ್ದಾರೆ. ಇನ್ನು ಮೃತ ಹರ್ಷನ ಕುಟುಂಬಕ್ಕೆ ಈಗಾಗಲೇ ಸರ್ಕಾರದಿಂದ 25 ಲಕ್ಷ ಆರ್ಥಿಕ ಸಹಾಯವಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕಾರಿಪುರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಬಂಧಿಸಲಾಗಿದೆ. ಘಟನೆ ಸಂಬಂಧ ಎಸ್ ಡಿ ಪಿ ಐ, ಪಿಎಫ್ಐ ಸೇರಿದಂತೆ ಕೆಲವು ಸಂಘಟನೆ ನಿಷೇಧಿಸುವ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ರಾಜ್ಯದಿಂದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *