Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನಾಯಕರಿಗೆ ಕ್ಯಾಪ್ಟನ್ ದೇ ಚಿಂತೆ , ಅವರು ಗೆಲ್ಲಲ್ಲ, ಕ್ಯಾಪ್ಟನ್ ಆಗಲ್ಲ : ಸಚಿವ ಶ್ರೀರಾಮುಲು

Facebook
Twitter
Telegram
WhatsApp

ಚಿತ್ರದುರ್ಗ: ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮತ್ತೆ ಶುರು ಮಾಡಿದ್ದು, ಇವರ ಪಾದಯಾತ್ರೆ ಬಗ್ಗೆ ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನಾಯಕರ ಪಾದಯಾತ್ರೆಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ ಎಂದಿದ್ದಾರೆ.

ಚಿತ್ರದುರ್ಗದ ನಾಯಕನಹಟ್ಟಿಯಲ್ಲಿ ಮಾತನಾಡಿದ್ದು, ಕಾಂಗ್ರೆಸ್ ನಾಯಕರು ಮುಂದಿನ ಎಲೆಕ್ಷನ್ ನಲ್ಲಿ ಗೆದ್ದರೇ ಯಾರು ಕ್ಯಾಪ್ಟನ್ ಆಗಬೇಕು ಎಂದು ಯೋಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಗೆಲ್ಲೋದು ಇಲ್ಲ, ಕ್ಯಾಪ್ಟನ್ ಆಗೋದು ಇಲ್ಲ. ಸದನದಲ್ಲಿ ಚರ್ಚೆ ಮಾಡಲು ಕೈ ನಾಯಕರು ಅವಕಾಶ ನೀಡಲಿಲ್ಲ. ಇಷ್ಟು ವರ್ಷ ಅಧಿಕಾರದಲ್ಲಿ ಇದ್ದ ವೇಳೆ ಯಾಕೆ ಮಾಡಲಿಲ್ಲ.

ಪಾದಯಾತ್ರೆ ಮಾಡುವ ಸ್ಥಿತಿ ಯಾಕೆ ಬಂದಿದೆ ಎಂದು ಯೋಚನೆ ಮಾಡಬೇಕು. 1ನೇ ಪಾದಯಾತ್ರೆ ಪೇಲ್ ಆಗಿದ್ದೀರಿ, 2 ನೇ ಪಾದಯಾತ್ರೆ ಹೊರಟಿದ್ದೀರಿ. ಈಗ ನಾನು ಮುಂದೆ, ನೀನು ಮುಂದೆ ಎಂದು ಪೈಪೋಟಿ ಮಾಡಿಕೊಂಡು ಹೊರಟಿದ್ದೀರಿ. ಯಾವುದೇ ಪರಿಸ್ಥಿತಿಯಲ್ಲಿ ಜನ BJP ಯನ್ನೇ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತಾರೆ. ಕಳೆದ ಬಾರಿ 104 ಸ್ಥಾನ ನೀಡಿದ್ದರು, ಈ ಬಾರಿ ಸ್ಪಷ್ಟ ಬಹುಮತ ಬರುತ್ತದೆ. ಮುಂದಿನ ದಿನಗಳಲ್ಲಿ BJP ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದಿದ್ದಾರೆ.

ಇನ್ನು ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ್ದು, ಉಕ್ರೇನ್ ನಲ್ಲಿ ಸಿಲುಕಿದ ವಿಧ್ಯಾರ್ಥಿಗಳ ಕರೆತರಲು CM ಕೇಂದ್ರದ ನಾಯಕರ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ. ನಾನು ಕೂಡಾ ಈ ಭಾಗದ ವಿಧ್ಯಾರ್ಥಿಗಳ ವಾಪಸ್ ಕರೆತರಲು ಯತ್ನಿಸುತ್ತಿದ್ದೇವೆ. ಪೋಷಕರಲ್ಲಿ ಮಕ್ಕಳ ಕುರಿತು ಆತಂಕವಿದೆ. 2-3 ವಿಮಾನಗಳು ಬಂದಿದ್ದು, ಎಲ್ಲರನ್ನೂ ಶೀಘ್ರದಲ್ಲೇ ಕರೆತರುವ ಯತ್ನ ನಡೆಯುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!